ದಿನಾಂಕ:08-11-2025 ರಂದು ಮಧ್ಯಾಹ್ನ, ಸವಣೂರು ಕಡೆಯಿಂದ ಪುತ್ತೂರು ಕಡೆಗೆ ಆಟೋ ರಿಕ್ಷಾ ಒಂದರಲ್ಲಿ ಪ್ರಸಾದ್ ಎಂಬಾತನು ನಿಷೇದಿತ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಪುತ್ತೂರು ನಗರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಜನಾರ್ಧನ ಕೆ.ಎಂ ರವರು ಸಿಬ್ಬಂದಿಗಳೊಂದಿಗೆ ತೆರಳಿ ಸದ್ರಿ ಆಟೋ ರಿಕ್ಷಾವನ್ನು ತಡೆದು ಪರಿಶೀಲಿಸಿದಾಗ, ಸುಮಾರು 1 ಕೆಜಿ ಗಿಂತಲೂ ಮೇಲ್ಪಟ್ಟ ನಿಷೇದಿತ ಮಾದಕ ವಸ್ತು ಗಾಂಜಾ ಹಾಗೂ ಮಾರಕಾಯುಧವಾದ ಸುಮಾರು ಅಂದಾಜು 25 ಇಂಚು ಉದ್ದದ ತಲವಾರು ಪತ್ತೆಯಾಗಿರುತ್ತದೆ.
ಸದ್ರಿ ಚಾಲಕನ ಬಗ್ಗೆ ವಿಚಾರಿಸಲಾಗಿ ಆತನು ಕಡಬ ಸವಣೂರು ನಿವಾಸಿ ಪ್ರಸಾದ್ ಇ (35) ಎಂಬುದಾಗಿ ತಿಳಿದುಬಂದಿರುತ್ತದೆ. ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ ಕ್ರ: 106/2025, ಕಲಂ-: 8(C), 20(ii)(c) NDPS & ಕಲಂ 25(1B),b) Indian Arms Act ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಆರೋಪಿತನನ್ನು ದಸ್ತಗಿರಿ ಮಾಡಲಾಗಿದ್ದು, ವಿಚಾರಣೆ ನಡೆಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.



























