ಕಡಬ: ಇಲ್ಲಿನ ನೂಜಿಬಾಳ್ತಿಲ ಗ್ರಾಮದ ಯುವಕನೋರ್ವ ಬೆಂಗಳೂರಿನ ರೂಂ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಮೃತನನ್ನು ಕಲ್ಲುಗುಡ್ಡೆ ನಿವಾಸಿ ಹಾಗೂ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ ಜುಬಿನ್ (25) ಎಂದು ಗುರುತಿಸಲಾಗಿದೆ.
ಅವರು ವಿದೇಶಕ್ಕೆ ಹೋಗುವ ಸಿದ್ಧತೆ ನಡೆಸುತ್ತಿದ್ದರೆಂದು ತಿಳಿದುಬಂದಿದ್ದು, ಈ ನಡುವೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆತಂಕ ಉಂಟುಮಾಡಿದೆ.
ಆತ್ಮಹತ್ಯೆಯ ನಿಖರ ಕಾರಣ ತಿಳಿದುಬಾರದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.



























