ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವನ್ನು ಫೆಬ್ರವರಿ 23, 2026ನೇ ಸೋಮವಾರ ಹಮ್ಮಿಕೊಳ್ಳಲಾಗಿದೆ.
ಈ ಶಿಬಿರವು ಬೆಳಿಗ್ಗೆ 9.00ರಿಂದ ಮಧ್ಯಾಹ್ನ 1.00ರವರೆಗೆ ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಲಿದೆ.
ಶಿಬಿರವು ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಸೆಂಚುರಿ ಗ್ರೂಪ್, ಡಾ. ಪಿ. ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್, ನ್ಯಾಷನಲ್ ಮೆಡಿಕೋಸ್ ಆರ್ಗನೈಸೇಶನ್ ಹಾಗೂ ಆಬ್ಕೋ ಸ್ಟೀಲ್ ಪ್ರೈ ಲಿಮಿಟೆಡ್ ಇವರ ಸಹಯೋಗದಲ್ಲಿ ನಡೆಯಲಿದೆ.
ಶಿಬಿರದ ವಿಶೇಷತೆಗಳು:
- ಸಂಪೂರ್ಣ ಕಣ್ಣಿನ ತಪಾಸಣೆ ನಡೆಸಲಾಗುವುದು.
- ಕನ್ನಡಕ ಅಗತ್ಯವಿರುವವರಿಗೆ ರಿಯಾಯಿತಿ ದರದಲ್ಲಿ ನೀಡಲಾಗುವುದು.
- ಅಗತ್ಯವಿರುವವರಿಗೆ ಕಣ್ಣಿನ ಪೊರೆಯ (ಕ್ಯಾಟರಾಕ್ಟ್) ಶಸ್ತ್ರಚಿಕಿತ್ಸೆ ನಿಗದಿತ ದಿನಾಂಕದಲ್ಲಿ ಪ್ರಸಾದ್ ನೇತ್ರಾಲಯದಲ್ಲಿ ಮಾಡಲಾಗುವುದು.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆಯುವಂತೆ ಆಯೋಜಕರು ವಿನಂತಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ:
ಮನೋಹರ್, ಸಾರ್ವಜನಿಕ ಸಂಪರ್ಕಾಧಿಕಾರಿ, ಪ್ರಸಾದ್ ನೇತ್ರಾಲಯ, ಪುತ್ತೂರು
ಮೊ.: 9741864013
ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.), ವಿಟ್ಲ
ಸಂಪರ್ಕ ಸಂಖ್ಯೆ: 9535123168


























