ಶ್ರೀವರ ಯುವಕ ಮಂಡಲ (ರಿ) ಪೂರ್ಲಪ್ಪಾಡಿ, ವಿಟ್ಲ ಪಡ್ನೂರು ಇದರ ಯುವಕ ಮಂಡಲದ 4ನೇ ವರ್ಷದ ವಾರ್ಷಿಕ ಕಾರ್ಯಕ್ರಮ ಹಾಗೂ ಹಗ್ಗಜಗ್ಗಾಟ ಪಂಧ್ಯಾಟ ಪೆಬ್ರವರಿ 21ನೇ ಶನಿವಾರ ಪೂರ್ಲಪ್ಪಾಡಿ ಶ್ರೀವರ ವೇಧಿಕೆ ಮುಂಬಾಗದಲ್ಲಿ ಜರುಗಿತು.
ಕಾರ್ಯಕ್ರಮದ ಉಧ್ಘಾಟನೆಯೊಂದಿಗೆ, ಯುವಕ ಮಂಡಲದ ವತಿಯಿಂದ ಮಧ್ಯಾಹ್ನ 2 ರಿಂದ ಶಾಲಾ ವಿಧ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಆಟೋಟ ಸ್ಪರ್ಧೆಗಳು ನಡೆದವು.
ಕಾರ್ಯಕ್ರಮಕ್ಕೆ ಬಂಟ್ವಾಳ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿ ಆಗಮಿಸಿ ಶುಭಹಾರೈಸಿದರು. ಸಂಜೆ 6.30ರಿoದ ಶಾಲಾ ವಿಧ್ಯಾರ್ಥಿಗಳಿಂದ ಹಾಗೂ ಊರವರಿಂದ ಸಾಂಸ್ಕೃತಿಕ
ಕಾರ್ಯಕ್ರಮ ಜರುಗಿತು. ರಾತ್ರಿ 8.30 ಗಂಟೆಗೆ ಸರಿಯಾಗಿ ಸಭಾಕಾರ್ಯಕ್ರಮ ಜರುಗಿತು. ಅಧ್ಯಕ್ಷತೆಯನ್ನು ವಿಟ್ಲ ಪಡ್ನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ ಇದರ ನಿರ್ಧೇಶಕರಾದ ಶ್ರೀ ಉದಯ ಭಟ್ ನೆಡ್ಯಾಳ ವಹಿಸಿದ್ದರು. ಅತಿಥಿಗಳಾಗಿ ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ಜಯಂತ್ ಪೂರ್ಲಪ್ಪಾಡಿ, ವಿಟ್ಲ ಪಡ್ನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ ಇದರ ಉಪಾಧ್ಯಕ್ಷರಾದ ಶ್ರೀ ರವೀಶ್ ಶೆಟ್ಟಿ ಕರ್ಕಳ, ಶ್ರೀ ಮಲರಾಯಿ ದೈವಸ್ಥಾನ ಆಡಳಿತ ಸೇವಾ ಟ್ರಸ್ಟ್ (ರಿ) ಪೂರ್ಲಪ್ಪಾಡಿ ಇದರ ಅಧ್ಯಕ್ಷರಾದ ಶ್ರೀ ರಾಮಣ್ಣ ಗೌಡ ದೇವರಮನೆ , ಬ್ರಹಶ್ರೀ ವಿವಿಧೋದ್ಧೇಶ ಸಹಕಾರಿ ಸಂಘ ನಿ ವಿಟ್ಲ ಇದರ ಅಧ್ಯಕ್ಷರಾದ ಶ್ರೀ ಸಂಜೀವ ಪೂಜಾರಿ ಎನ್, ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಅಭಿವೃಧ್ದಿ ಅಧಿಕಾರಿ ಶ್ರೀ ಶ್ರೀಶೈ¯ ಢೋಣೂರ, ಶ್ರೀವರ ಯುವಕ ಮಂಡಲದ ಗೌರವಾಧ್ಯಕ್ಷರಾದ ಶ್ರೀ ಈಶ್ವರ ಭಟ್ ಬದನಾಜೆ, ವಿಟ್ಲ ಪಡ್ನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ ಇದರ ನಿರ್ಧೇಶಕರಾದ ಶ್ರೀಮತಿ ಧರ್ಮಾವತಿ ದೇವರಮನೆ, ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶ್ರೀ ನಾಗೇಶ್ ಶೆಟ್ಟಿ ಕೊಡಂಗಾಯಿ, ಶಿಲ್ಪಶ್ರೀ ಯುವಕ ಮಂಡಲ (ರಿ.) ಕೊಡಂಗಾಯಿ ಇದರ ಅಧ್ಯಕ್ಷರಾದ ಶ್ರೀ ರೋಹಿತ್ ರೈ ಚೆಂಬರಡ್ಕ, ಫ್ರೆಂಡ್ಸ್ ಕಾಪುಮಜಲು (ರಿ.) ಇದರ ಅಧ್ಯಕ್ಷರಾದ ಶ್ರೀ ವಿನಯ ಜೋಗಿ ಕಾಪುಮಜಲು, ಶಿವಾಜಿ ಪೆಂಡ್ಸ್ ಸೇವಾ ಟ್ರಸ್ಟ್ ರಿ. ಮಂಕುಡೆ ಇದರ ಅಧ್ಯಕ್ಷರಾದ ಶ್ರೀ ನವೀನ್ ಕುಳಾಲು ಪುಡೆಮಜಲು, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಜಯಲಕ್ಷ್ಮೀ ಕೆ, ಶ್ರೀವರ ಯುವಕ ಮಂಡಲದ ಅಧ್ಯಕ್ಷರಾದ ಶ್ರೀ ಕಿರಣ್ ಚಂದ್ರ ಆಳ್ವ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದಲ್ಲಿ ಸಮಾಜದಲ್ಲಿ ಸಾಧನೆಗೈಯುತ್ತಿರುವ ಸಾಧಕರಾದ ಶ್ರೀ ಹಿರಿಯ ಯಕ್ಷಗಾನ ಅರ್ಥದಾರಿಗಳಾದ ಶ್ರೀ ಜಗದೀಶ ರೈ ಪನಡ್ಕ, ಮೆಸ್ಕಾಂನಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಕೆ ಚಂದ್ರಹಾಸ ರವರಿಗೆಸನ್ಮಾನಿಸಲಾಯಿತು. ಮತ್ತು ಯುವಕ ಮಂಡಲದ ವತಿಯಿಂದ ನಡೆದ ವಿವಿದ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀಮತಿ ಮಾಳವಿ ಯತೀಶ್ ಪ್ರಾರ್ಥಿಸಿದರು. ಶ್ರೀ ಜಯಂತ ಪಿ ಸ್ವಾಗತಿಸಿ, ಯುವಕ ಮಂಡಲದ ಕಾರ್ಯದರ್ಶಿ ಶ್ರೀ ಯತೀಶ್ ಪಿ ರವರು ವಾರ್ಷಿಕ ವರದಿಯನ್ನು ಮಂಡಿಸಿದರು. ಹರೀಶ್ ವಿಟ್ಲ
ವಂದಿಸುವುದರೊAದಿಗೆ ಕಾರ್ಯಕ್ರಮ ನಿರೂಪಿಸಿದರು. ಯುವಕ ಮಂಡಲದ ಪಧಾಧಿಕಾರಿಗಳು ಈ ಸಂದರ್ಭದಲ್ಲಿ ಸಹಕರಿಸಿದರು.
ನಂತರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಲೆವೆಲ್ ಮಾದರಿಯ 530 ಕೆ.ಜಿ ವಿಭಾಗದ ೭ಜನರ ಮುಕ್ತ ಹೊನಲು ಬೆಳಕಿನ
ಹಗ್ಗಜಗ್ಗಾಟ ಪಂದ್ಯಾಟ ನಡೆಯಿತು.


























