ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಕ್ರ.260/2014 (ಕಲಂ 306 IPC) ಪ್ರಕರಣದ ಆರೋಪಿ, ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಬಂಟ್ವಾಳ ಕರಿಯಂಗಳ ನಿವಾಸಿ ದುನಿಯಾ ಶರೀಫ್ @ ಮಹಮ್ಮದ್ ಶರೀಫ್ (52) ಎಂದು ಗುರುತಿಸಲಾಗಿದೆ. ಇವರು ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ವಿದೇಶಕ್ಕೆ ತೆರಳಿ ಹಲವು ವರ್ಷಗಳಿಂದ ತಪ್ಪಿಸಿಕೊಂಡು ಬದುಕುತ್ತಿದ್ದರು.
ದಿನಾಂಕ 05-05-2026 ರಂದು ವಿದೇಶದಿಂದ ಭಾರತಕ್ಕೆ ಮರಳಿದ ವೇಳೆ, ಮುಂಬೈ ಸಹಾರಾ ಠಾಣೆ ಪೊಲೀಸರ ಸಹಕಾರದೊಂದಿಗೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದರು.
ಬಂಧಿತನನ್ನು 06-05-2026 ರಂದು ಮಾನ್ಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಈ ಬಂಧನ ಕಾರ್ಯಾಚರಣೆ ಮೂಲಕ ದೀರ್ಘಕಾಲದಿಂದ ಬಾಕಿ ಉಳಿದಿದ್ದ ಪ್ರಕರಣಕ್ಕೆ ಪ್ರಮುಖ ತಿರುವು ಸಿಕ್ಕಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.



























