ಮಂಗಳೂರು ನಗರದ ಕೋಡಿಕಲ್ ಉರ್ವ ಸಮೀಪದ ನಾರಾಯಣ ಗುರು ಸಹಕಾರ ಸಂಘದ ಬಳಿ ರಾತ್ರಿ ವೇಳೆ ನಡೆದ ವಾಹನ ತಪಾಸಣೆ ಸಂದರ್ಭ ಪೊಲೀಸರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಮಾಹಿತಿಯ ಪ್ರಕಾರ, ರಾತ್ರಿ ತಪಾಸಣೆ ನಡೆಸುತ್ತಿದ್ದ ವೇಳೆ ಕಾನ್ಸ್ಟೆಬಲ್ ಅವರು ಅನುಮಾನಾಸ್ಪದ ವಾಹನವನ್ನು ನಿಲ್ಲಿಸಲು ಸೂಚಿಸಿದ್ದರು. ಆದರೆ ವಾಹನದಲ್ಲಿದ್ದ ಆರೋಪಿಗಳು ವಾಹನವನ್ನು ಅತಿವೇಗದಲ್ಲಿ ಚಲಾಯಿಸಿ ಸ್ಥಳದಿಂದ ಪರಾರಿಯಾಗಿದ್ದರು.
ಬಳಿಕ ಕೆಲ ಸಮಯದ ನಂತರ ಆರೋಪಿಗಳು ಮತ್ತೆ ಸ್ಥಳಕ್ಕೆ ಹಿಂತಿರುಗಿ ಬಂದು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.


























