ಪುತ್ತೂರು: ಕಳೆದ ಮೂರು ವರ್ಷಗಳಿಂದ ವಿಜಯ ಸಾಮ್ರಾಟ್(ರಿ.) ಪುತ್ತೂರು ವತಿಯಿಂದ ಯುವನಾಯಕ ಸಹಜ್ ಜೆ ರೈ ಬಳಜ್ಜ ರವರ ಮುಂದಾಳತ್ವದಲ್ಲಿ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ ‘ಪುತ್ತೂರ್ದ ಪಿಲಿಗೊಬ್ಬು’ ಕಾರ್ಯಕ್ರಮದ ಸೀಸನ್ ನಾಲ್ಕರ ದಿನಾಂಕ ನಿಗದಿಯಾಗಿದೆ.
ಅಕ್ಟೋಬರ್ 17, ಶನಿವಾರ ನಡೆಯಲಿರುವ ಈ ವಿಶೇಷ ಕಾರ್ಯಕ್ರಮವು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಜರುಗಲಿದ್ದು, ಹುಲಿವೇಷ ಕಲಾವಿದರ ಅದ್ಭುತ ಪ್ರದರ್ಶನ, ಸಾಂಪ್ರದಾಯಿಕ ನೃತ್ಯ ಹಾಗೂ ಸಾಂಸ್ಕೃತಿಕ ವೈಭವದ ಸಂಗಮಕ್ಕೆ ವೇದಿಕೆಯಾಗಲಿದೆ.
ಈ ಕಾರ್ಯಕ್ರಮದ ಆಯೋಜಕರಾಗಿ ವಿಜಯ ಸಾಮ್ರಾಟ್(ರಿ.) ಪುತ್ತೂರು ಕಾರ್ಯನಿರ್ವಹಿಸುತ್ತಿದ್ದು, ಸರ್ವರಿಗೂ ಆತ್ಮೀಯ ಸ್ವಾಗತ ಕೋರಲಾಗಿದೆ.
ತುಳುನಾಡಿನ ಸಾಂಸ್ಕೃತಿಕ ಹೆಮ್ಮೆಯಾದ ಹುಲಿವೇಷವನ್ನು ಸಂಭ್ರಮದಿಂದ ಆಚರಿಸುವ ಈ ಕಾರ್ಯಕ್ರಮದಲ್ಲಿ ಸಾವಿರಾರು ಕಲಾಭಿಮಾನಿಗಳು ಭಾಗವಹಿಸುವ ನಿರೀಕ್ಷೆಯಿದೆ. ಹುಲಿವೇಷದ ರೋಚಕ ಪ್ರದರ್ಶನಗಳನ್ನು ಕಣ್ತುಂಬಿಕೊಳ್ಳಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.


























