ಉಪ್ಪಿನಂಗಡಿ: ವಿಟ್ಲ ಗ್ರಾಮೀಣ ಸಹಕಾರಿ ಸಂಘದ ನೂತನ 5ನೇ ಶಾಖೆಯ ಉದ್ಘಾಟನಾ ಸಮಾರಂಭವು ಜುಲೈ 4ರಂದು ಬೆಳಿಗ್ಗೆ 10.30ಕ್ಕೆ ಉಪ್ಪಿನಂಗಡಿಯ ಗಾಂಧಿ ಪಾರ್ಕ್ನ ರಾಮ ಗೋಪಾಲ ಕಾಂಪ್ಲೆಕ್ಸ್ನ ಪ್ರಥಮ ಮಹಡಿಯಲ್ಲಿ ನಡೆಯಲಿದೆ.
ವಿಟ್ಲದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಸಂಘವು ಈಗಾಗಲೇ ಕಲ್ಲಡ್ಕ, ಬಿ.ಸಿ.ರೋಡ್, ಕನ್ಯಾನ ಹಾಗೂ ಪುತ್ತೂರಿನಲ್ಲಿ ಯಶಸ್ವಿಯಾಗಿ ಶಾಖೆಗಳನ್ನು ನಡೆಸುತ್ತಿದ್ದು, ಇದೀಗ ಉಪ್ಪಿನಂಗಡಿಯಲ್ಲಿ ತನ್ನ ಐದನೇ ಶಾಖೆಯನ್ನು ಆರಂಭಿಸುವ ಮೂಲಕ ಸೇವಾ ವಿಸ್ತರಣೆಗೆ ಮತ್ತೊಂದು ಹೆಜ್ಜೆ ಇಡುತ್ತಿದೆ.
ಸಂಘದ ಅಧ್ಯಕ್ಷ ಹೆಚ್. ಜಗನ್ನಾಥ ಸಾಲಿಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ನೂತನ ಶಾಖೆಯನ್ನು ಉದ್ಘಾಟಿಸಲಿದ್ದು, ಮಾಜಿ ಶಾಸಕ ಸಂಜೀವ ಮಠಂದೂರು ಭದ್ರತಾ ಕೊಠಡಿಯನ್ನು ಉದ್ಘಾಟಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಹೆಚ್. ಎನ್. ರಮೇಶ್ ಶಾಖೆಯ ಗಣಕೀಕರಣಕ್ಕೆ ಚಾಲನೆ ನೀಡಲಿದ್ದು, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ದೀಪ ಪ್ರಜ್ವಲನೆ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಉಪ್ಪಿನಂಗಡಿ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷ ಕೆ. ಅಬ್ದುಲ್ ರಹಿಮಾನ್, ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ಹಾಗೂ ಉಪ್ಪಿನಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಕೆ.ವಿ. ಪ್ರಸಾದ್ ಮತ್ತು ರಾಮ ಗೋಪಾಲ ಕಾಂಪ್ಲೆಕ್ಸ್ನ ಕಟ್ಟಡ ಮಾಲಕರಾದ ಕೆ. ರಾಜೇಶ್ ನಾಯಕ್ ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.



























