ಮಂಗಳೂರು: ರಾಷ್ಟ್ರೀಯ ಹೆದ್ದಾರಿ- 66ರ ಮಂಗಳೂರು–ಉಡುಪಿ ರಸ್ತೆಯ ಕೂಳೂರಿನ ವಿ.ಆರ್.ಎಲ್. ಕಚೇರಿ ಎದುರು ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಸದಾನಂದ ಶೆಟ್ಟಿಗಾರ್ (46) ಎಂದು ಗುರುತಿಸಲಾಗಿದೆ. ಇವರು KA19HT5288 ಸಂಖ್ಯೆಯ ಸ್ಕೂಟರ್ನಲ್ಲಿ ಕೊಟ್ಟಾರ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದರು.
ಈ ವೇಳೆ ಅದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ KA19AE0785 ಸಂಖ್ಯೆಯ ಕಂಟೈನರ್ ಲಾರಿಯನ್ನು ಅದರ ಚಾಲಕ ಮಹಮ್ಮದ್ ಅಜರುದ್ದೀನ್ ಅವರು ನಿರ್ಲಕ್ಷ್ಯ ಹಾಗೂ ದುಡುಕುತನದಿಂದ ಚಲಾಯಿಸಿ ಸ್ಕೂಟರ್ಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಲಾರಿ ಸ್ಕೂಟರ್ ಸವಾರನ ಮೇಲೆ ಹರಿದ ಪರಿಣಾಮ ಸದಾನಂದ ಶೆಟ್ಟಿಗಾರ್ ಅವರಿಗೆ ಗಂಭೀರ ಗಾಯಗಳಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.


























