ಪುರುಷರಕಟ್ಟೆ: ನಿನ್ನೆ ಸಂಜೆ ಪುರುಷರಕಟ್ಟೆಯಲ್ಲಿ ನಡೆದ ಘಟನೆಯ ಹಿನ್ನೆಲೆಯಲ್ಲಿ ಇಂದು ಅರುಣ್ ಕುಮಾರ್ ಪುತ್ತಿಲ ಅವರು ಯುವತಿಯ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಧೈರ್ಯ ತುಂಬಿದರು.
ಈ ವೇಳೆ ಕುಟುಂಬದ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದು, ಯಾವುದೇ ಸಂಕಷ್ಟದ ಸಂದರ್ಭದಲ್ಲಿ ತಮ್ಮ ಬೆಂಬಲ ಸದಾ ಇರಲಿದೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸ್ಥಳೀಯರು ಹಾಗೂ ಬೆಂಬಲಿಗರು ಉಪಸ್ಥಿತರಿದ್ದರು.

























