ಮಂಗಳೂರು, ಜು.10: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್ ಪೊಲೀಸ್ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಭಾರತ ಪ್ರವೇಶಿಸಿ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 8 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಪತ್ತೆಹಚ್ಚಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ಜುಲೈ 9ರಂದು ಮುಕ್ಕ ಸಮೀಪದ ನಿರ್ಮಾಣ ಹಂತದ ಕಟ್ಟಡದ ಮೇಲೆ ಸುರತ್ಕಲ್ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಈ ವೇಳೆ ಒಟ್ಟು 54 ಮಂದಿ ಕಟ್ಟಡ ಕಾರ್ಮಿಕರ ದಾಖಲೆಗಳನ್ನು ಪರಿಶೀಲಿಸಲಾಯಿತು. ಪರಿಶೀಲನೆ ವೇಳೆ ಬಾಂಗ್ಲಾದೇಶದ 8 ಮಂದಿ ಪ್ರಜೆಗಳು ಅಕ್ರಮವಾಗಿ ವಾಸ್ತವ್ಯ ಹೂಡಿ ಕೆಲಸ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಬಂಧಿತರು ಸುಮಾರು ಮೂರು ತಿಂಗಳ ಹಿಂದೆ ಬಾಂಗ್ಲಾದೇಶದಿಂದ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮಾರ್ಗವಾಗಿ ಅಕ್ರಮವಾಗಿ ಭಾರತ ಪ್ರವೇಶಿಸಿದ್ದರು. ಬಳಿಕ ಮುರ್ಷಿದಾಬಾದ್ ವಿಳಾಸ ಹೊಂದಿರುವ ಆಧಾರ್ ಕಾರ್ಡ್ಗಳ ಬಣ್ಣದ ಜೆರಾಕ್ಸ್ ಪ್ರತಿಗಳ ಮೇಲೆ ತಮ್ಮ ಭಾವಚಿತ್ರ ಅಂಟಿಸಿ ಗುರುತಿನ ದಾಖಲೆಗಳಂತೆ ಬಳಸಿಕೊಂಡು ಕಳೆದ ಎರಡು ತಿಂಗಳಿನಿಂದ ಮುಕ್ಕದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಬಂಧಿತರಿಂದ ರಾಷ್ಟ್ರೀಯ ಗುರುತಿನ ಚೀಟಿ (National ID Card), ಜನನ ಪ್ರಮಾಣಪತ್ರ ಹಾಗೂ ಕುಟುಂಬ ಸದಸ್ಯರ ದಾಖಲೆಗಳನ್ನು ಪರಿಶೀಲಿಸಿದ ವೇಳೆ ಅವರು ಬಾಂಗ್ಲಾದೇಶದ ನಿವಾಸಿಗಳೆಂಬುದು ದೃಢಪಟ್ಟಿದೆ. ಅಲ್ಲದೆ, ಭಾರತ ಪ್ರವೇಶಿಸಲು ಅಗತ್ಯವಾದ ಪಾಸ್ಪೋರ್ಟ್ ಅಥವಾ ವೀಸಾ ಹೊಂದಿರದೆ ಅಕ್ರಮವಾಗಿ ಗಡಿ ದಾಟಿ ಬಂದಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆ.
ಈ ಸಂಬಂಧ ಮುಂದಿನ ಕಾನೂನು ಕ್ರಮಕ್ಕಾಗಿ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO), ಬೆಂಗಳೂರು ಅವರಿಗೆ ವರದಿ ಸಲ್ಲಿಸಲಾಗಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪತ್ತೆ ಹಚ್ಚಿದ ಬಾಂಗ್ಲಾ ಪ್ರಜೆಗಳ ವಿವರ..!!!
- Md Muktar Ali(36), S/o Late Lal Mahammad, R/o Uttar Kanapara Char, Ashariadaha- 6290, Ashariadaha, Godagari,Rajshahi, Rajshahi Division, Bangladesh.
- Md Rakibur Hossen(44), S/o Md Motiur Rahman, R/o Matikata, Matikata 6290, Ward No 8, Matikata, Godagari, Rajshahi, Bangladesh
- Md Ajarul Islam(36), S/o Md Akramul Haqui, R/o Matikata, Matikata- 6290, Godagari, Rajshahi, Bangladesh
- Md Zahid Hosen(18), S/o Md Nurul Islam, R/o Matikata, Matikata- 6290, Godagari, Rajshahi, Bangladesh,
- Md Belal Hossain((36), S/o Md Aynal Haqui, R/o 733, Uttar Kanapara Char, Ashariadaha- 6290, Ashariadaha, Godagari,Rajshahi, Rahshahi Division, Bangladesh.
- Md Hasibul Hasan Shanto (37), S/o Md Najimuddin, R/at Pirijpur, Pirijpur-6290, Ward 4, Matitala, Godagari, Rajshahi, Bangladesh
- Md Sameul Hasan (23), S/o Md Shahidu Liton Babu, R/at Charamtola, Char Ashariadah-6290, Ward No 4, Thana: Godagari, Rajshahi, Bangladesh
- Md Seibur Rahman, S/o Lal Mahaman, R/at Village: Uttar Kanapara, Post: Char Ashariadah-6290, Upazila: Godagari, District: Rajshahi, Bangladesh
ಈ ಕಾರ್ಯಾಚರಣೆಯನ್ನು ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶ್ರೀ ಶ್ರೀಕಾಂತ್ ಅವರ ನೇತೃತ್ವದಲ್ಲಿ ಸುರತ್ಕಲ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್, ಪಿಎಸ್ಐ ರಘು ನಾಯಕ ಹಾಗೂ ಠಾಣೆಯ ಸಿಬ್ಬಂದಿಗಳಾದ ಎಎಸ್ಐ ರಾಜೇಶ್ ಆಳ್ವ, ತಿರುಪತಿ ಅಳ್ಳೊಳ್ಳಿ, ಉಮೇಶ್, ರಾಜೇಂದ್ರ ಪ್ರಸಾದ್, ಕಾರ್ತಿಕ್, ವಿನೋದ್ ಕುಮಾರ್, ಸತೀಶ್ ಸತ್ತಿಗೇರಿ, ಸಂತೋಷ್ ಮತ್ತು ಓಂಪ್ರಕಾಶ್ ಬಿಂಗಿ ಯಶಸ್ವಿಯಾಗಿ ನಡೆಸಿದರು.

























