ಬಂಟ್ವಾಳ: ಬಿಸಿರೋಡ್ನಲ್ಲಿ ಜುಲೈ 16ರಂದು ನಡೆದ ಬಾಲಕಿ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಪರವಾಗಿ ಯಾವುದೇ ನ್ಯಾಯವಾದಿಗಳು ವಕಾಲತ್ತು ವಹಿಸದಂತೆ ಕೋರಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಬಂಟ್ವಾಳ ವಕೀಲರ ಸಂಘಕ್ಕೆ ಇಂದು ಮನವಿ ಸಲ್ಲಿಸಲಾಯಿತು.
ಮನವಿಯಲ್ಲಿ, ಲಾವಣ್ಯ ಹತ್ಯೆ ಪ್ರಕರಣವನ್ನು ಅತ್ಯಂತ ಕ್ರೂರ ಮತ್ತು ಖಂಡನೀಯ ಕೃತ್ಯ ಎಂದು ಉಲ್ಲೇಖಿಸಿ, ಇಂತಹ ಗಂಭೀರ ಪ್ರಕರಣದ ಆರೋಪಿಯ ಪರವಾಗಿ ವಕಾಲತ್ತು ವಹಿಸದಂತೆ ನ್ಯಾಯವಾದಿಗಳಿಗೆ ಮನವಿ ಮಾಡಲಾಗಿದೆ ಎಂದು ಸಂಘಟನೆಯ ಮುಖಂಡರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್, ಬಜರಂಗದಳ ಬಂಟ್ವಾಳ ಪ್ರಖಂಡದ ಪದಾಧಿಕಾರಿಗಳು ಹಾಗೂ ಪುತ್ತೂರು ಜಿಲ್ಲಾ ಪ್ರಮುಖರು ಉಪಸ್ಥಿತರಿದ್ದರು.


























