ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಪಡೂರು ಪ್ರದೇಶದಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇರಿದಂತೆ ಒಟ್ಟು ₹4.90 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಆ.12ರಂದು ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಯಶ್ ಕುಮಾರ್ ಶರ್ಮಾ, ಐಪಿಎಸ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ದಾಳಿಯಲ್ಲಿ ಸುಮಾರು ₹2.25 ಲಕ್ಷ ಮೌಲ್ಯದ 22.57 ಗ್ರಾಂ ಎಂಡಿಎಂಎ, 30.34 ಗ್ರಾಂ ಗಾಂಜಾ, ಡ್ರಗ್ಸ್ ಸಾಗಾಟಕ್ಕೆ ಬಳಸಲಾಗಿದೆ ಎನ್ನಲಾದ ಕಾರು ಹಾಗೂ ಐದು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಾಶೀರ್ ಹುಸೇನ್ (37), ಅಡ್ಯಾರ್, ಮಂಗಳೂರು; ಮಹಮ್ಮದ್ ಜುನೈದ್ (38), ಗೋಳ್ತಮಜಲು, ಬಂಟ್ವಾಳ; ಹಾಗೂ ಮೊಹಮ್ಮದ್ ಅಫ್ರೀದಿ (24), ಕಂಕನಾಡಿ, ಮಂಗಳೂರು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 112/2026ರಂತೆ ಎನ್ಡಿಪಿಎಸ್ ಕಾಯ್ದೆ-1985ರ ಕಲಂ 8(C) ಜೊತೆಗೆ 22(C) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಕೆ.ವಿ., ಪಿಎಸ್ಐ ರನ್ನ ಗೌಡ ಎಸ್. ಪಾಟೀಲ್, ಪ್ರೊಬೆಷನರಿ ಪಿಎಸ್ಐಗಳಾದ ಶಿವರಾಮ್ ಹಾಗೂ ಫಕೀರಪ್ಪ ಸೇರಿದಂತೆ ಸಿಬ್ಬಂದಿ ಉದಯ ರೈ, ರಾಧಾಕೃಷ್ಣ ಕೆ., ಪ್ರವೀಣ್ ರೈ, ಪ್ರಶಾಂತ್, ಲೋಕೇಶ್, ವಿವೇಕ್ ರೈ, ಕುಮಾರ್, ಬಸವರಾಜ್, ಶ್ರೀಧರ್ ಹಾಗೂ ಧನ್ಯಶ್ರೀ ಭಾಗವಹಿಸಿದ್ದರು. ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್ ಮತ್ತು ಸಂಪತ್ ಅವರು ಕಾರ್ಯಾಚರಣೆಗೆ ಸಹಕರಿಸಿದರು.




























