ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ ಹೊಡೆದಿದೆ.
ಸಾಣೂರು ಜಂಕ್ಷನ್ನಲ್ಲಿ ಸಂಭವಿಸಿದ ಭೀಕರ ಅಪಘಾತ ಸಂಭವಿಸಿದೆ. ಕಾರ್ಕಳದಿಂದ ಮೂಡುಬಿದ್ರೆ ಕಡೆಗೆ ಹೋಗುತ್ತಿದ್ದ ಬಸ್, ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮಾಜಿ ಸಚಿವ ರಮಾನಾಥ ರೈಗೆ ಸಣ್ಣ ಪುಟ್ಟ ಗಾಯವಾಗಿದೆ.
ಇಂದು ರಾಮನಾಥ ರೈ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಮಧ್ಯಾಹ್ನ 3:30ರ ಸುಮಾರಿಗೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರು ಜಂಕ್ಷನ್ ಬಳಿ ಅಪಘಾತಕ್ಕೆ ಒಳಗಾಯಿತು. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.


























