ಪುತ್ತೂರು: ಮಂಗಳೂರು-ಯಶವಂತಪುರ ವಿಶೇಷ ರೈಲು ವಿಸ್ಟಾಡೋಮ್ ರೈಲಿಗೆ ಪುತ್ತೂರು ರೈಲು ನಿಲ್ದಾಣದಲ್ಲಿ ಶಾಸಕರ ಸಂಜೀವ ಮಠಂದೂರು ಸ್ವಾಗತಿಸಿದರು.
ಮಂಗಳೂರು ರೈಲು ನಿಲ್ದಾಣದಿಂದ ಹೊರಟ ವಿಶೇಷ ರೈಲಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಚಾಲನೆ ನೀಡಿದರು. ಮಂಗಳೂರಿಂದ ಹೊರಟ ವಿಶೇಷ ರೈಲನ್ನು ಕಬಕ ಪುತ್ತೂರು ನಿಲ್ದಾಣದಲ್ಲಿ ಶಾಸಕರು ಸ್ವಾಗತಿಸಿದರು. ಬಳಿಕ ಮಾತನಾಡಿದ ಶಾಸಕರು, ವಿಸ್ಟಾಡೋಮ್ ವಿಶೇಷ ರೈಲಿನ ಮೂಲಕ ಪ್ರಯಾಣಿಕರಿಗೆ ಪಶ್ಚಿಮ ಘಟ್ಟಗಳ ಪ್ರಕೃತಿ ರಮನೀಯ ತಾಣಗಳನ್ನು ಆಸ್ವಾದಿಸಲು ಸಹಕಾರಿಯಾಗಲಿದೆ ಎಂದರು.
ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್, ಸದಸ್ಯ ಪಿ.ಜಿ ಜಗನ್ನಿವಾಸ ರಾವ್, ಪುಡಾದ ಅಧ್ಯಕ್ಷ ಬಾಮಿ ಅಶೋಕ್ ಶೆಣೈ, ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಸದಸ್ಯ ಬೂಡಿಯಾರ್ ರಾಧಾಕೃಷ್ಣ ರೈ, ಮೈಸೂರು ವಿಭಾಗದ ಮುಖ್ಯ ಟಿಕೆಟ್ ನಿರೀಕ್ಷಕ ವಿಠಲ ನಾಯಕ್ ನೇರಳಕಟ್ಟೆ, ಸ್ಟೇಷನ್ ಮಾಸ್ಟರ್ ಹರಿಚಂದ್ ಯಾದವ್, ದೇವಪ್ಪ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.