ಮಂಗಳೂರು: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಜು.12 ರ ಸೋಮವಾರ ನಡೆದಿದೆ. ಮೃತರನ್ನು ವಾಮಂಜೂರು ನಿವಾಸಿ ವಿನೋದ್ ರಾಜ್ ಅಮೀನ್ ಎಂಬವರ ಪತ್ನಿ ಪ್ರಿಯಾಂಕ (31) ಎಂದು ಗುರುತಿಸಲಾಗಿದೆ.
ಪ್ರಿಯಾಂಕ ಅವರು ದ್ವಿಚಕ್ರ ವಾಹನದಲ್ಲಿ ಜು.10ರ ಶನಿವಾರ ಯೆಯ್ಯಾಡಿ ಹರಿಪದವು ಎಂಬಲ್ಲಿ ತೆರಳುತ್ತಿದ್ದಾಗ ವಿರುದ್ಧ ದಿಕ್ಕಿನಲ್ಲಿ ಬಂದ ಆಲ್ಟೊ ಕಾರು ಡಿಕ್ಕಿಯಾಗಿತ್ತು. ಅಪಘಾತದ ಪರಿಣಾಮ ಪ್ರಿಯಾಂಕ ಅವರ ತಲೆಗೆ ಗಂಭೀರವಾದ ಗಾಯಗಳಾಗಿದ್ದು ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಪಘಾತದ ಬಳಿಕ ಕೋಮಾದಲ್ಲಿದ್ದ ಪ್ರಿಯಾಂಕ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.ಕದ್ರಿ ಠಾಣೆಯಲ್ಲಿ ಅಪಘಾತದ ಪ್ರಕರಣ ದಾಖಲಾಗಿದೆ.