ಮಂಗಳೂರು: ಕರಾವಳಿ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಪರಿಣಾಮ ದಕ್ಷಿಣ ರೈಲ್ವೆಗೆ ಸೇರಿದ ಕುಲಶೇಖರ- ಪಡೀಲ್ ರೈಲ್ವೆ ಸುರಂಗ ಮಾರ್ಗದ ಬಳಿ ಜು.16 ಶುಕ್ರವಾರ ಭಾರೀ ಭೂ ಕುಸಿತವಾಗಿದ್ದು ಹಳಿಗಳ ಮೇಲೆ ಮಣ್ಣು ಬಿದ್ದಿದೆ.
![](https://zoomintv.online/wp-content/uploads/2021/07/WhatsApp-Image-2021-07-16-at-1.31.36-PM-3.jpeg)
ರೈಲ್ವೆ ಇಲಾಖೆ ತಡೆಗೋಡೆ ನಿರ್ಮಿಸಿದ್ದರೂ ಭಾರೀ ಪ್ರಮಾಣದ ಗುಡ್ಡ ಕುಸಿದಿರುವುದರಿಂದ ತಡೆಗೋಡೆ ಜಾರಿ ಮಣ್ಣು ರೈಲು ಹಳಿಗಳ ಮೇಲೆ ಬಿದ್ದಿದೆ. ಭೂ ಕುಸಿತವಾಗಿರುವ ಹಿನ್ನಲೆಯಲ್ಲಿ ಈ ಹಳಿಯ ಮೂಲಕ ಚಲಿಸುವ ಎಲ್ಲಾ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ರೈಲ್ವೇ ಇಲಾಖೆ ಹೇಳಿದೆ. ಇನ್ನು ಮಣ್ಣು ತೆರವುಗೊಳಿಸುವ ಕಾರ್ಯಕ್ಕೆ ರೈಲ್ವೆ ಇಲಾಖೆ ಮುಂದಾಗಿದೆ.
![](https://zoomintv.online/wp-content/uploads/2021/07/WhatsApp-Image-2021-07-16-at-1.31.36-PM-2.jpeg)
![](https://zoomintv.online/wp-content/uploads/2021/07/WhatsApp-Image-2021-07-16-at-1.31.36-PM-1.jpeg)
![](https://zoomintv.online/wp-content/uploads/2021/07/WhatsApp-Image-2021-07-16-at-1.31.36-PM.jpeg)