ಪುತ್ತೂರು : ಖಾಸಗಿ ಕೆಲಸಕ್ಕಾಗಿ ಪುತ್ತೂರಿಗೆ ಬಂದಿದ್ದ ಮಾಜಿ ಸಚಿವ ವಿನಯಕುಮಾರ್ ಸೊರಕೆಯವರನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಹಾಗೂ ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಅಲಿಯವರು ಪ್ರವಾಸಿ ಮಂದಿರದಲ್ಲಿ ಭೇಟಿ ಯಾಗಿ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ನಡೆಸುತ್ತಿರುವ ಚಟುವಟಿಕೆಯ ಬಗ್ಗೆ ಮಾಹಿತಿ ನೀಡಿದರು ಹಾಗೂ ಪಕ್ಷ ಸಂಘಟನೆಯ ಬಗ್ಗೆ ಮಾತುಕತೆ ನಡೆಸಿದರು.
ಪುತ್ತೂರು ಬ್ಲಾಕ್ ನಲ್ಲಿ ಉತ್ತಮ ರೀತಿಯಲ್ಲಿ ಪಕ್ಷ ಸಂಘಟನೆಯಾಗುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಸೊರಕೆ ಯವರು ಮುಂದಿನ ದಿನದಲ್ಲಿ ಪಕ್ಷ ಸಂಘತಿಸುವಲ್ಲಿ ಕೆಲವು ಸಲಹೆ ಸೂಚನೆಗಳನ್ನು ನೀಡಿದರು.
ಈ ಭೇಟಿ ಸಂದರ್ಭದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಶಶಿಕಿರಣ್ ರೈ, ಬ್ಲಾಕ್ ಪ್ರದಾನ ಕಾರ್ಯದರ್ಶಿ ಪೂರ್ಣೇಶ್ ಭಂಡಾರಿ, ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ವಿ ಎಚ್ ಎ ಶಕೂರ್ ಹಾಜಿ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಸಂತೋಷ್ ಭಂಡಾರಿ ಚಿಲ್ಮೆತ್ತಾರ್, ಪುರಸಭೆಯ ಮಾಜಿ ಉಪಾಧ್ಯಕ್ಷ ಲ್ಯಾನ್ಸಿ ಮಸ್ಕರೇನಸ್, ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್, ಬ್ಲಾಕ್ ಕೋವಿಡ್ ಸೇವಕ್ ಸಿಮ್ರಾನ್ ನಝೀರ್ ಉಪಸ್ಥಿತರಿದ್ದರು