ಹಿಂದೂಗಳ ದಶಕಗಳ ಕನಸಿನ ಕ್ಷೇತ್ರ ಅಯೋಧ್ಯೆಯ ಶ್ರೀರಾಮಮಂದಿರದ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಇಂದಿಗೆ ಒಂದು ವರ್ಷ. ವಾರ್ಷಿಕೋತ್ಸವದ ಹಿನ್ನೆಲೆ ಇಂದು ಪಡಿತರ ವಿತರಣೆ ಯೋಜನೆ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ವರ್ಚುವಲ್ ಆಗಿ ಭಾಗಿಯಾಗಲಿದ್ದಾರೆ.

ರಾಮಮಂದಿರ ಭೂಮಿಪೂಜೆ ವಾರ್ಷಿಕೋತ್ಸವ ಸಮಾರಂಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಇಂದು ರಾಮಲಲ್ಲಾಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ.
ಈ ವಿಶೇಷ ದಿನದಂದು ರಾಮಲಲ್ಲಾ ಗೆ ಹಳದಿ ರೇಷ್ಮೆ ವಸ್ತ್ರದಲ್ಲಿ ಅಲಂಕಾರ ಮಾಡಲಾಗಿದ್ದು, ಧಾರ್ಮಿಕ ಆಚರಣೆಗೆ ಅವಕಾಶ ನೀಡಲಾಗಿದೆ. ಮಧ್ಯಾಹ್ನ 1 ಗಂಟೆಗೆ ಉಚಿತ ಪಡಿತರ ವಿತರಣೆ ಮಾಡಲಿದ್ದು, 500ಕ್ಕೂ ಹೆಚ್ಚು ಮಂದಿ ಭಾಗಿಯಾಗಲಿದ್ದಾರೆ. ರಾಮಮಂದಿರ ಕಟ್ಟಡ ನಿರ್ಮಾಣ ಕಾರ್ಯ ಈಗಾಗಲೇ ಆರಂಭವಾಗಿದ್ದು, 2023ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ.