ಪುತ್ತೂರು: ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರವು ನಿನ್ನೆ ರಾಜ್ಯಾಂದ್ಯಂತ ನೈಟ್ ಕರ್ಫ್ಯೂ ಹಾಗೂ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಘೋಷಣೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪುತ್ತೂರಿನಾದ್ಯಂತ ಸೀಮಿತ ವಲಯಗಳು ಕೆಲಸ ನಿರ್ವಹಿಸುತ್ತಿದ್ದು,ಮಧ್ಯಾಹ್ನದ ವರೆಗೆ ವಾಹನ ಸಂಚಾರ ಎಂದಿನಂತೆ ಕಂಡು ಬರುತ್ತಿತ್ತು.
ದಿನಸಿ, ತರಕಾರಿ, ಮಾಂಸ, ಹಾಲು ಸೇರಿದಂತೆ ಅಗತ್ಯ ವಸ್ತುಗಳ ಅಂಗಡಿಗಳು, ಬೀದಿ ಬದಿ ವ್ಯಾಪಾರಕ್ಕೆ ಬೆಳಗ್ಗೆ 5 ರಿಂದ ಮಧ್ಯಾಹ್ನ 2ಗಂಟೆಯವರೆಗೆ ಅವಕಾಶ ನೀಡಲಾಗಿದ್ದು, ಮಧ್ಯಾಹ್ನದ ತನಕ ಗ್ರಾಹಕರು ಎಂದಿನಂತೆ ಪೇಟೆಯಲ್ಲಿ ಓಡಾಡುತ್ತಿರುವುದು ಕಂಡು ಬಂತು.
ಈ ನಡುವೆ ಅಗತ್ಯ ವಸ್ತುಗಳ ಸಾಗಾಟದ ವಾಹನಗಳು, ದ್ವಿಚಕ್ರ ವಾಹನಗಳು ಮತ್ತು ಆಟೊ ರಿಕ್ಷಾಗಳು ಓಡಾಡುತಿತ್ತು. ಕೆ.ಎಸ್.ಆರ್.ಟಿ.ಸಿ ಬಸ್ಗಳು ರಸ್ತೆಗಿಳಿದರೂ ಪ್ರಯಾಣಿಕರ ಸಂಖ್ಯೆ ವಿರಳವಾಗಿತ್ತು. ಬಸ್ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆಗಿಂತ ಚಾಲಕ, ನಿರ್ವಾಹಕರು ಕುಳಿತುಕೊಂಡು ಪ್ರಯಾಣಿಕರಾಗಿ ಕಾಯುತ್ತಿರುವುದು ಕಂಡು ಬಂತು. ಪ್ರಯಾಣಿಕರ ಸಂಖ್ಯೆಯನ್ನು ಆಧರಿಸಿ ಬಸ್ಗಳ ಓಡಾಡ ನಡೆಯುತ್ತಿತ್ತು.