ಪುತ್ತೂರು: ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಶ್ರೀರಾಮ ಗೆಳೆಯರ ಬಳಗದ ಆಶ್ರಯದಲ್ಲಿ ಭಾರತ ಮಾತಾಪೂಜನ ಕಾರ್ಯಕ್ರಮ ನಡೆಯಿತು.
ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು. ಮುಂಡೂರು ಗ್ರಾಮ ಪಂಚಾಯತ್ ಸದಸ್ಯ ಅಶೋಕ್ ಪುತ್ತಿಲ ಬೌದ್ದಿಕ್ ಮಾಡಿದರು. ಸಂಘ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
ಕಾರ್ಯಕ್ರಮದಲ್ಲಿ ವಸಂತ ರೈ, ಸೀತಾರಾಮ ಆಚಾರ್ಯ, ಅರುಣ್ ಪುತ್ತಿಲ, ಗ್ರಾಮ ಪಂಚಾಯತ್ ಸದಸ್ಯ ಬಾಲಕೃಷ್ಣ ಪೂಜಾರಿ, ಶ್ರೀರಾಮ ಗೆಳೆಯರ ಬಳಗದ ಅಧ್ಯಕ್ಷ ಹರೀಶ್ ನಾಯ್ಕ್, ಶ್ರೀಧರ ನಾಯ್ಕ್.,ಧನಂಜಯ, ಪ್ರಸಾದ್ ಬಿಕೆ, ಮಾಜಿ ಪಂಚಾಯತ್ ಸದಸ್ಯೆ ಪ್ರೇಮ ಗುತ್ತಿನಪಾಲು, ಮೋನಪ್ಪ ಗೌಡ ಹಾಗೂ ಗೆಳೆಯರ ಬಳಗದ ಸದಸ್ಯರು ಉಪಸ್ಥಿತರಿದ್ದರು.