ಪುತ್ತೂರು: ತುಳುನಾಡ ಆರಾಧ್ಯ ದೈವ ಕೊರಗಜ್ಜ ದೈವದ ವಾಟ್ಸ್ ಪ್ ನಲ್ಲಿ ಅವಹೇಳನಕಾರಿಯಾಗಿ ಪ್ರಚಾರ ಪಡಿಸಿರುವ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಬ್ಲಾಕ್ ಕಾಂಗ್ರೆಸ್ ಎಸ್. ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್ ಪುತ್ತೂರು ನಗರ ಠಾಣೆಯಲ್ಲಿ ದೂರು ಸಲ್ಲಿಸಿದರು.
ತುಳುನಾಡಿನ ಕಾರ್ಣಿಕ ದೈವ ಕೊರಗಜ್ಜನ ಚಿತ್ರ ಗೆ ಅಶ್ಲೀಲ ಫೋಟೋ ಎಡಿಟ್ ಮಾಡಿ ದುಷ್ಕರ್ಮಿಗಳು ವಾಟ್ಸಪ್ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ಕೊರಗಜ್ಜನ ಅಪಾರ ಭಕ್ತಾದಿಗಳ ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟು ಮಾಡಿರುತ್ತಾರೆ.
ದೈವವನ್ನು ಈ ರೀತಿಯಾಗಿ ಸಾರ್ವಜನಿಕವಾಗಿ ವಾಟ್ಸಪ್ ಗ್ರೂಪಿನಲ್ಲಿ ಅವಹೇಳನ ಮಾಡುತ್ತಿರುವುದು ಒಂದು ಪಂಗಡಕ್ಕೆ ಮಾಡಿದ ದ್ರೋಹವಾಗಿರುತ್ತದೆ, ತುಳುನಾಡಿನ ಜನರ ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟುಮಾಡಿದ ಆರೋಪಿಗಳನ್ನು ಆದಷ್ಟು ಶೀಘ್ರವಾಗಿ ಬಂಧಿಸುವಂತೆ ಕಾಂಗ್ರೆಸ್ ಎಸ್ಸಿ ಘಟಕದಿಂದ ಪುತ್ತೂರು ಪೋಲಿಸ್ ಠಾಣೆಯಲ್ಲಿ ಇಂದು ದೂರು ದಾಖಲಿಸಲಾಯಿತು.
ಈ ಸಂದರ್ಭದಲ್ಲಿ ಇತಿಹಾಸ ಪ್ರಸಿದ್ಧ ಸ್ವಾಮಿ ಕೊರಗಜ್ಜ ಅಗ್ನಿ ಕಲ್ಲುರ್ಟಿ ದೈವಸ್ಥಾನ ಮಜಲು ಮೊಟ್ಟೆತಡ್ಕ ದೈವಗಳ ಸನ್ನಿಧಿಯಲ್ಲಿ ಧರ್ಮದರ್ಶಿ ಮಣಿ ಅವರ ಮುಖೇನ ಆರೋಪಿಗಳು ಯಾರೇ ಆಗಿದ್ದರೂ ಅವರಿಗೆ ತಕ್ಕ ಶಿಕ್ಷೆ ಆಗಲಿ ಎಂದು ಹರಕೆ ಹಾಗು ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಯಂಗ್ ಬ್ರಿಗೇಡ್ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಅಭಿಷೇಕ್ ಬೆಳ್ಳಿಪ್ಪಾಡಿ, ಪುತ್ತೂರು ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷರಾದ ಕೇಶವ ಪಡೀಲ್, ವಸಂತ ಪಟ್ಟೆ, ಶರತ್ ಕೇಪುಲು, ಗಣೇಶ್ ಎಚ್ಚ್ ಪಡೀಲ್, ಹರೀಶ್ ಬಲ್ನಾಡು, ರಮೇಶ್ ಕೇಪುಲು, ಸತೀಶ್ ಪಡೀಲ್, ಅಶೋಕ್ ನೆಕ್ಕಿಲಾಡಿ,ವಿವೇಕ್,ಭವಿತ್ ಕುಂಬ್ರ, ಗೌರವ್ ಮುರ,ಜಯಂತ್ ನಗರ,ಅಕ್ಷಯ್ ಕೇಪುಲು,ಭರತ್ ಆಳಕ್ಕೆ ಮತ್ತಿತರರು ಉಪಸ್ಥಿತರಿದ್ದರು.



























