ಪುತ್ತೂರು: ಅಕ್ರಮವಾಗಿ ಕಸಾಯಿಖಾನೆಗೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಪುತ್ತೂರಿನ ಸಾಲ್ಮರದಲ್ಲಿ ಆ.12 ರಂದು ರಾತ್ರಿ ನಡೆದಿದೆ.
ಎಪಿಎಂಸಿ ರಸ್ತೆಯ ಸಾಲ್ಮರ ಮೌಂಟನ್ ವ್ಯೂ ಶಾಲೆಗೆ ಹೋಗುವ ತಿರುವು ರಸ್ತೆಯ ಸಮೀಪ ಮನೆಯೊಂದರಲ್ಲಿ ಅಕ್ರಮವಾಗಿ ಕಸಾಯಿಖಾನೆ ಇದೆ ಎಂಬ ಮಾಹಿತಿ ಪಡೆದು ಹಿಂದೂ ಜಾಗರಣ ವೇದಿಕೆ ಮತ್ತು ಭಜರಂಗದಳದ ಕಾರ್ಯಕರ್ತರು ದಾಳಿ ನಡೆಸಿದ್ದು. ಪೊಲೀಸರಿಗೆ ಮಾಹಿತಿ ನೀಡಿದ್ದರು.
ಪೊಲೀಸರು ಸ್ಥಳಕ್ಕೆ ತೆರಳಿ ಅಕ್ರಮ ದನದ ಮಾಂಸ ಇರುವುದನ್ನು ಖಚಿತ ಪಡಿಸಿಕೊಂಡು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಸ್ಥಳದಲ್ಲಿ ಹಲವಾರು ಮಂದಿ ಕಾರ್ಯಕರ್ತರು ಜಮಾಯಿಸಿದ್ದು, ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.