ಚಾಮರಾಜನಗರ: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಕೊಳ್ಳೇಗಾಲ ತಾಲೂಕು ತೇರಂಬಳ್ಳಿ ಕೆರೆ ಬಳಿ ಇಬ್ಬರು ಪ್ರೇಮಿಗಳು ಕಾರಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಯಳಂದೂರು ತಾಲ್ಲೂಕು ಮಾಂಬಳ್ಳಿ ಗ್ರಾಮದ ಕಾಂಚನಾ (20) ಹಾಗು ಶ್ರೀನಿವಾಸ್(26) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು ಎಂಬ ಮಾಹಿತಿ ಲಭ್ಯವಾಗಿದೆ. ಮದುವೆಗೆ ಮನೆಯವರು ಒಪ್ಪದ ಕಾರಣ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಕಾರಿನೊಳಗೆ ಸೀಮೆ ಎಣ್ಣೆ ಸುರಿದುಕೊಂಡು ಬಳಿಕ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ ಎನ್ನಲಾಗಿದ್ದು, ಘಟನೆ ಸಂಬಂಧ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.