ಬಂಟ್ವಾಳ: ಹಲವಾರು ವಾರೆಂಟ್ ಪ್ರಕರಣದ ಆರೋಪಿಯನ್ನು ಬಂಟ್ವಾಳ ಡಿ.ವೈ.ಎಸ್.ಪಿ.ವೆಲೆಂಟೈನ್ ಡಿ.ಸೋಜ ನೇತ್ರತ್ವದ ವಿಶೇಷ ತಂಡ ಬಂಧಿಸಿದೆ. ಮಂಗಳೂರು ತಾಲೂಕಿನ ಜೊಕಟ್ಟೆ ನಿವಾಸಿ ರಿಜ್ವಾನ್ ಯಾನೆ ರಿಚ್ಚು(30) ಬಂಧಿತ ಆರೋಪಿ.
ಬಂಟ್ವಾಳ ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದನ ಕಳ್ಳತನ ಸೇರಿದಂತೆ ಅನೇಕ ಪ್ರಕರಣಗಳು ಪ್ರಕರಣ ದಾಖಲಾಗಿತ್ತು. ಈ ಪ್ರಕರಣಗಳಿಗೆ ಸೇರಿದಂತೆ ಈತ ನ್ಯಾಯಾಲಯಕ್ಕೆ ಹಾಜರಾಗದೆ ಈತನ ಮೇಲೆ ವಾರೆಂಟ್ ಜಾರಿಯಾಗಿದ್ದರೂ ತಲೆಮರೆಸಿಕೊಂಡು ತಿರುಗಾಡುವ ಬಗ್ಗೆ ಮಾಹಿತಿ ಮೇಲೆ ಬಂಟ್ವಾಳ ಡಿ.ವೈ.ಎಸ್.ವೆಲೆಂಟೈನ್ ಡಿ.ಸೋಜ ಅವರ ತಂಡ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಇತನ ಮೇಲೆ ಬಂಟ್ವಾಳ ಮಾತ್ರವಲ್ಲದೇ ಕಾರ್ಕಳ ಗ್ರಾಮಾಂತರ, ಬಜಪೆ, ಪುತ್ತೂರು, ಗೋಕರ್ಣ, ಹಾಗೂ ಕೊಣಾಜೆ ಪೋಲೀಸ್ ಠಾಣೆಯಲ್ಲಿಯೂ ಪ್ರಕರಣ ದಾಖಲಾಗಿದ್ದು, ಈ ಎಲ್ಲಾ ಪ್ರಕರಣಗಳಿಗೆ ಸಂಬಂಧಿಸಿದಂತೆ ರಿಜ್ವಾನ್ ವಾರೆಂಟ್ ಆರೋಪಿಯಾಗಿದ್ದ.