ಕಡಬ: ಉಪ್ಪಿನಂಗಡಿ – ಸುಬ್ರಹ್ಮಣ್ಯ ರಸ್ತೆಯ ಕಡಬ ತಾಲೂಕಿನ ಮರ್ಧಾಳ ಎಂಬಲ್ಲಿ ಆ .14 ರಂದು ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕಡಬ ತಾಲೂಕಿನ ಬಂಟ್ರ ಗ್ರಾಮದ ಕಂಪ ತುಂಬಿ ಮನೆ ನಿವಾಸಿ ಮೋನಪ್ಪ ಗೌಡ (60 ವ)ಗಾಯಗೊಂಡವರು.
ಮರ್ಧಾಳ ಜಂಕ್ಷನ್ ಬಳಿಯ ತಿರುವಿನಲ್ಲಿ ಮೋನಪ್ಪ ಗೌಡರವರು ಚಲಾಯಿಸುತ್ತಿದ್ದ ಬೈಕ್ ಹಾಗೂ ಸ್ವಿಫ್ಟ್ ಡಿಸೈರ್ ಕಾರು ನಡುವೆ ಅಪಘಾತ ನಡೆದಿದೆ. ಅಪಘಾತದಿಂದ ತೀವ್ರ ಗಾಯಗೊಂಡ ಮೋನಪ್ಪರವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಅಪಘಾತಕ್ಕಿಡಾದ ಕಾರು ಕಲ್ಲಾಜೆಯಿಂದ ಕಡಬ ಕಡೆಗೆ ತೆರಳುತಿತ್ತು. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.