ಪುತ್ತೂರು: ನರಿಮೊಗರು ವಲಯ ಕಾಂಗ್ರೆಸ್ ಮಾಸಿಕ ಸಭೆಯ ಬಳಿಕ ವಲಯ ವ್ಯಾಪ್ತಿಯ ನರಿಮೊಗರು ದೋಳದ ನಿವಾಸಿ ಮೂರು ಬಾರಿ ಪಂಚಾಯತ್ ಸದಸ್ಯರಾಗಿದ್ದ ಹಾಗೂ ನರಿಮೊಗರು ಸಹಕಾರಿ ಸಂಘದ ಮಾಜಿ ನಿರ್ದೇಶಕರಾಗಿದ್ದ ನಾಗರಾಜ ಪೂಜಾರಿ ದೋಳ ಇವರು ಅನಾರೋಗ್ಯದಿಂದ ಮನೆಯಲ್ಲಿದ್ದು, ಅವರ ಆರೋಗ್ಯವನ್ನು ನರಿಮೊಗರು ಕಾಂಗ್ರೆಸ್ ವತಿಯಿಂದ ವಿಚಾರಿಸಲಾಯಿತು. ಪಕ್ಷಕ್ಕೆ ನೀಡಿದ ಸೇವೆಗಾಗಿ ಅವರನ್ನು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನಿಸಲಾಯಿತು.
ನರಿಮೊಗರು ವಲಯ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರಾಗಿ ಪಕ್ಷಕ್ಕೆ ಸೇವೆ ಸಲ್ಲಿಸಿರುವ ಮಾಡತ್ತಾರು ವೆಂಕಟರಮಣ ಭಟ್ ರವರ ಮನೆಗೆ ತೆರಳಿ ಅವರ ಆರೋಗ್ಯ ವಿಚಾರಿಸಿ ಅವರನ್ನು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನಿಸಲಾಯಿತು.
ನರಿಮೊಗರು ವಲಯಕ್ಕೆ ಸಂಬಂಧಿಸಿದ ಬೆದ್ರಾಳ ನಿವಾಸಿ ಹಿರಿಯ ಕಾಂಗ್ರೆಸ್ ನಾಯಕ ಎಸ್ ಇಸ್ಮಾಯಿಲ್ ಯಾನೆ ಬೆದ್ರಾಳ ಮೋನುಚ್ಚ ರವರನ್ನು ಅವರ ಮನೆಯಲ್ಲಿ ಭೇಟಿಯಾಗಿ ಅವರ ಅರೋಗ್ಯ ವಿಚಾರಿಸಿ ಪಕ್ಷದ ಸೇವೆಗಾಗಿ ಅವರನ್ನು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಅಲಿ, ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಪುರುಷಕಟ್ಟೆ, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಉಪಾಧ್ಯಕ್ಷ ರವೀಂದ್ರ ರೈ ನೆಕ್ಕಿಲು, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಸಂತೋಷ್ ಭಂಡಾರಿ ಚಿಲ್ಮೆತ್ತಾರ್, ಕಾಂಗ್ರೆಸ್ ಮುಖಂಡ ಮಂಜುನಾಥ ಶೇಕ ಉಪಸ್ಥಿತರಿದ್ದರು.