ವೀರಕಂಭ: ಸ್ವಾತಂತ್ರ್ಯ ದಿನಾಚರಣೆಯು ಭಾರತೀಯರ ಪಾಲಿಗೆ ಸಂಭ್ರಮದ ದಿನ ನಮ್ಮ ದೇಶದ ಘನತೆಯನ್ನು ಎತ್ತಿ ಸಾರುವ ದಿನವಾಗಿದೆ. ನಾವಿಂದು ಅನುಭವಿಸುವ ಸಂತೋಷಗಳ ಹಿಂದೆ ಹಲವಾರು ಜನರ ತ್ಯಾಗ ಬಲಿದಾನವಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭ ಶಾಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣಗೈದ ನಂತರ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಂಜೀವ ಮೂಲ್ಯ ಮಾತನಾಡಿದರು.
ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಶ್ರೀಮತಿ ವಿಜಯ ಶೇಖರ್ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವೀರಕಂಬ ಒಕ್ಕೂಟದ ಸೇವಾ ಪ್ರತಿನಿಧಿ ಶ್ರೀಮತಿ ರೇವತಿ, ಯೋಜನೆಯ ಸದಸ್ಯರು , ಶಾಲಾ ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿಗಳು ಭಾಗವಹಿಸಿದ್ದರು. ಸಹ ಶಿಕ್ಷಕಿ ಸಂಗೀತ ಶರ್ಮ ಸ್ವಾಗತಿಸಿ, ವಂದಿಸಿದರು.