ಪುತ್ತೂರು: ಬಡಗನ್ನೂರು ಹಾಗೂ ಪಡುವನ್ನೂರು ಗ್ರಾಮದ ಕಾಂಗ್ರೆಸ್ ವಲಯ ಸಮಿತಿಗೆ ಈಗಾಗಲೇ ಅಧ್ಯಕ್ಷರನ್ನು ನೇಮಕಗೊಳಿಸಲಾಗಿದ್ದು, ವಲಯ ಸಮಿತಿಗೆ ಪದಾಧಿಕಾರಿಗಳನ್ನು ನೇಮಕಗೊಳಿಸುವ ಬಗ್ಗೆ ಮತ್ತು ಈ ಎರಡು ವಲಯಗಳಲ್ಲಿರುವ ಬೂತ್ ಸಮಿತಿ ರಚನೆಯ ಬಗ್ಗೆ ಸಮಾಲೋಚನೆ ಸಭೆಯು ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು ರವರ ಸಮ್ಮುಖದಲ್ಲಿ ನಡೆಯಿತು.
ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ ಆ ಭಾಗದ ಕಾಂಗ್ರೆಸ್ ಉಸ್ತುವಾರಿ ರೋಷನ್ ರೈ ಬನ್ನೂರು, ಬ್ಲಾಕ್ ಕಾಂಗ್ರೆಸ್ ಸಮಿತಿ ಸದಸ್ಯ ಗುರು ಪ್ರಸಾದ್ ರೈ, ಪಡುವನ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ ಅಧ್ಯಕ್ಷ ಗೋಪಾಲ ಕೃಷ್ಣ ಒಕ್ಕಲಿಗ, ಬಡಗನ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ ಅಭಿದ್ ಕುಕ್ಕಾಜೆ ಉಪಸ್ಥಿತರಿದ್ದರು.