ವಿಟ್ಲ: ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ವಕೀಲ ಉಮ್ಮರ್ ವಿರುದ್ಧ ಹಿಂದೂ ಜಾಗರಣ ವೇದಿಕೆ ವತಿಯಿಂದ ವಿಟ್ಲ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ವಿಟ್ಲದ ವಿ.ಹೆಚ್. ಕಾಂಪ್ಲೆಕ್ಸ್ ನಲ್ಲಿರುವ ಉಮ್ಮರ್. ಕೆ ಎಂಬವರ ವಕೀಲ ಕಛೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವತಿಯೊಂದಿಗೆ ವಕೀಲ ಉಮ್ಮರು ಅಸಭ್ಯವಾಗಿ ವರ್ತಿಸಿದ ಇದನ್ನು ಮನೆಗೆ ತಿಳಿಸಿದರೆ ನಿನ್ನ ಮರ್ಯಾದೆ ಹೋಗುತ್ತದೆ ಎಂದು ಹೆದರಿಸಿದ ಘಟನೆ ನಡೆದಿದ್ದು, ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿ ಉಮ್ಮಾರ್ ನ್ನು ಬಂಧಿಸಿ ಕೆಲ ಸಮಯದಲ್ಲೆ ಜಾಮೀನು ತೆಗೆದುಕೊಂಡು ಹೊರಗೆ ಬಂದ ತಕ್ಷಣ ಕಂಪ್ಲೇಂಟ್ ಮಾಡಿದ ಯುವತಿಯ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಗ್ಗೆ ನಮ್ಮ ಹಿಂದೂ ಜಾಗರಣ ವೇದಿಕೆ ಗಮನಕ್ಕೆ ಬಂದಿರುತ್ತದೆ.
ವಿಟ್ಲ ಪರಿಸರದಾದ್ಯಂತ ಹೆಣ್ಣು ಮಕ್ಕಳಿಗೆ ಕಿರುಕುಳ ನೀಡುತ್ತಿರುವ ಪ್ರಕರಣಗಳು ಅತಿ ಹೆಚ್ಚು ಸಂಖ್ಯೆಯಲ್ಲಿ ನಡೆಯುತ್ತಿದೆ. ಇದನ್ನು ಮಟ್ಟ ಹಾಕಬೇಕೆಂದು ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ವಿನಂತಿಸುತ್ತಿದೆ ಹಾಗೂ ಇದು ಮುಂದುವರಿದಲ್ಲಿ ಹಿಂದೂ ಜಾಗರಣ ವೇದಿಕೆ ತೀವ್ರವಾಗಿ ಪ್ರತಿಭಟಿಸುತ್ತದೆ, ಇಂತಹ ಜಿಹಾದಿ ಶಕ್ತಿಗಳ ವಿರುದ್ದ ಶಾಶ್ವತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಂಬಂಧಪಟ್ಟ ಅಧಿಕಾರಿಯನ್ನು ಹಿಂ.ಜಾ.ವೇ ಒತ್ತಾಯಿಸಿದೆ.
ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಪರ್ಕ ಪ್ರಮುಖ ನರಸಿಂಹ ಶೆಟ್ಟಿ ಮಾಣಿ, ಹಿಂದೂ ಜಾಗರಣ ವೇದಿಕೆ ತಾಲೂಕು ಅಧ್ಯಕ್ಷರಾದ ಗಣೇಶ್ ಕುಲಾಲ್ ಕೆದಿಲ, ತಾಲೂಕು ಕಾರ್ಯದರ್ಶಿ ಹರ್ಷ ರೈ ವಿಟ್ಲ, ಮಾತೃಸುರಕ್ಷಾ ಸಂಯೋಜಕ ಲಿತೀಶ ಗಡಿಯಾರ, ಹಿಂದೂ ಯುವ ವಾಹಿನಿ ಸಹ ಸಂಯೋಜಕ ದಿವಾಕರ್ ಪೆರ್ನೆ, ಚೇತನ್ ಕಡಂಬು ಹಾಗೂ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಉಪಸ್ಥಿತರಿದ್ದರು.