ಸವಣೂರು: ಕೆಲತಿಂಗಳ ಹಿಂದೆ ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದ ಕುಮಾರಮಂಗಲ ಪ್ರದೇಶದಲ್ಲಿ ಹಾಗೂ ಪಾಲ್ತಾಡಿ ಗ್ರಾಮದ ಬಂಬಿಲ ಪ್ರದೇಶದಲ್ಲಿ ಚಿರತೆ ಸಂಚಾರದ ಬಗ್ಗೆ ಸುದ್ದಿಯಾಗಿತ್ತು.
![](https://zoomintv.online/wp-content/uploads/2020/12/IMG-20201229-WA0046.jpg)
ಸೋಮವಾರವೂ ಪುತ್ತೂರು ತಾಲೂಕಿನ ಸರ್ವೆ, ಎಲಿಯ ಪ್ರದೇಶದಲ್ಲೂ ಜನರಿಗೆ ಕಾಣ ಸಿಕ್ಕ ಚಿರತೆ ಇದೀಗ ಈ ಪ್ರದೇಶದಲ್ಲಿ ಮತ್ತೆ ಕಂಡುಬಂದಿದೆ.ಡಿ. 27 ರಂದು ರಾತ್ರಿ ಚುನಾವಣಾ ಕಾರ್ಯ ಮುಗಿದ ಬಳಿಕ ಪಕ್ಷವೊಂದರ ಕಾರ್ಯಕರ್ತರು ಮನೆಗೆ ಹೋಗುವ ಸಮಯದಲ್ಲಿ ಸುಮಾರು 9.30 ರ ವೇಳೆಗೆ ಬಂಬಿಲ ನಾಡೋಳಿ ಸೇತುವೆ ಬಳಿ ಕಾಣಸಿಕ್ಕಿದೆ. ಡಿ.28ರಂದು ಬೆಳಿಗ್ಗೆ ಸುಮಾರು 5.30 ರ ವೇಳೆಗೆ ಬಂಬಿಲ ಆದಿಮೊಗೇರ್ಕಳ ದೈವಸ್ಥಾನದ ಬಳಿಯ ಮುಖ್ಯ ರಸ್ತೆಯಲ್ಲಿ ವಾಕಿಂಗ್ ಹೋಗುವವರಿಗೆ ಕಾಣಸಿಕ್ಕಿದೆ.