Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ದ್ವಿತೀಯ ಪಿ.ಯು ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ

December 29, 2020
in ಪುತ್ತೂರು, ಶಿಕ್ಷಣ
0
ದ್ವಿತೀಯ ಪಿ.ಯು ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪ್ರತಿಭೆಯನ್ನು ಗೌರವಿಸಿ, ಪ್ರತಿಭೆಯನ್ನು ಸಮಾಜಕ್ಕೆ ತೋರ್ಪಡಿಸುವಂತಾಗಲಿ: ಸುಬ್ರಹ್ಮಣ್ಯ ಭಟ್.

Advertisement
Advertisement
Advertisement

ಪುತ್ತೂರು: ಬದುಕಿನಲ್ಲಿ ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡಾಗ ಜೀವನದ ಪಯಣ ಸುಗಮವಾಗುತ್ತದೆ. ಎದುರಾಗುವ ಆಪತ್ತುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ ಪರಿಹರಿಸುವಲ್ಲಿ ವ್ಯಕ್ತಿತ್ವದ ಗಟ್ಟಿತನ ಪ್ರಕಟಗೊಳ್ಳುತ್ತದೆ. ವಿಪತ್ತಿನ ಸಂದರ್ಭದಲ್ಲಿ ಧೈರ್ಯವನ್ನು ಕಳೆದುಕೊಳ್ಳದೆ ಛಲದಿಂದ ಮುನ್ನಡೆದರೆ ವ್ಯಕಿಮೌಲ್ಯದ ಉತ್ತಮ ಪ್ರತಿನಿಧಿಯಾಗಿ ಮೂಡಿ ಬರಲು ಸಾಧ್ಯವಾಗುತ್ತದೆ ಎಂದು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಹೇಳಿದರು.

Advertisement
Advertisement

ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳ ಅಭಿನಂದನ ಸಮಾರಂಭದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ಉತ್ತಮ ಅಂಕಗಳನ್ನು ರ‍್ಯಾಂಕ್ ಗಳನ್ನು ಗಳಿಸುವುದು ವಿದ್ಯಾರ್ಥಿಗಳು ಮಾಡಿದಂತಹ ಸತತ ಪರಿಶ್ರಮದಿಂದಾಗಿದೆ. ವಿದ್ಯಾರ್ಥಿಗಳು ತಮ್ಮಲ್ಲಿನ ಪ್ರತಿಭೆಯನ್ನು ಗೌರವಿಸಿ, ಪ್ರತಿಭೆಯನ್ನು ಸಮಾಜಕ್ಕೆ ತೋರ್ಪಡಿಸುವಂತಾಗಬೇಕು. ನಮ್ಮ ಭವಿಷ್ಯವನ್ನು ನಾವೇ ನಿರ್ಧರಿಸಬೇಕು. ಪಠ್ಯವನ್ನು ಮೀರಿದ ಜೀವನ ಪಾಠವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಕಠಿಣ ಪರಿಸ್ಥಿತಿಯನ್ನು ಎದುರಿಸುವ ಇಚ್ಛಾಶಕ್ತಿ, ಆತ್ಮಸ್ಥೈರ್ಯಗಳನ್ನು ಬೆಳೆಸಿಕೊಳ್ಳಬೇಕು. ಆದರ್ಶಗಳನ್ನು ಮೈಗೂಡಿಸಿಕೊಂಡು ಸಮಾಜವು ಗುರುತಿಸುವಂಥ ಕಾರ್ಯಗಳನ್ನು ಕೈಗೊಳ್ಳಬೇಕು. ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರ ಪರಿಕಲ್ಪನೆಯಾದ ಆತ್ಮನಿರ್ಭರ ಕಾರ್ಯಕ್ಕೆ ಕಾಲೇಜಿನಲ್ಲಿ ಕಲಿತ ಪ್ರತಿಭಾನ್ವಿತ ಕುಡಿಗಳು ತೊಡಗಿಸಿಕೊಳ್ಳಬೇಕು.

ಬೇರೆ ಬೇರೆ ಕ್ಷೇತ್ರಗಳಲ್ಲಿ ತನ್ನತನದ ಛಾಪು ಒತ್ತುವುದರೊಂದಿಗೆ ದೇಶದ ಭವಿಷ್ಯವನ್ನು ಉಜ್ವಲಗೊಳಿಸಬೇಕು. ಕಾಲೇಜಿನಲ್ಲಿ ಕಲಿತ ವಿದ್ಯಾಲಯದ ಚಿಂತನೆಯನ್ನು ದೈನಂದಿನ ಬದುಕಿನಲ್ಲಿ ಅನುಷ್ಠಾನಗೊಳಿಸಬೇಕು. ಈ ಮೂಲಕ ವಿವೇಕಾನಂದರ ಹೆಸರನ್ನು ಇಟ್ಟುಕೊಂಡ ಈ ಸಂಸ್ಥೆಯ ಧ್ಯೇಯ, ವಿವೇಕಾನಂದರ ವ್ಯಕ್ತಿತ್ವ ಎಲ್ಲರದಾಗಬೇಕು ಎಂದರು.ಕಾರ್ಯಕ್ರಮದ ಇನ್ನೋರ್ವ ಅತಿಥಿ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ| ಮಹೇಶ್ ಪ್ರಸನ್ನ ಮಾತನಾಡಿ ಜೀವನದ ಗುರಿಯನ್ನು ತಲುಪುವಲ್ಲಿ ಸಾಕಷ್ಟು ಸವಾಲುಗಳನ್ನು ವಿದ್ಯಾರ್ಥಿಗಳು ಎದುರಿಸಬೇಕಾಗುತ್ತದೆ.

ವಿದ್ಯಾರ್ಥಿಗಳು ತಮ್ಮಲ್ಲಿನ ದೌರ್ಬಲ್ಯದಿಂದ ಹೊರಬಂದು ಭಾವನಾತ್ಮಕ ಸ್ಥಿರತೆಯನ್ನು ಗಟ್ಟಿ ಮಾಡಿಕೊಂಡಾಗ ನಮ್ಮಲ್ಲಿನ ಶಕ್ತಿಯು ಹೊರಹೊಮ್ಮಲು ಸಾಧ್ಯವಾಗುತ್ತದೆ.ಯಾವುದೇ ಕ್ಷೇತ್ರವಾದರೂ ಅದನ್ನು ಆರಿಸಿ ಸಾಧನೆ ಮಾಡುತ್ತಾ ಮುಂದುವರೆಯಬೇಕು, ಜೊತೆಗೆ ತಾನು ಕಲಿತ ಸಂಸ್ಥೆಯನ್ನು , ಕಲಿಸಿದ ಗುರುಗಳನ್ನು ಗೌರವಿಸುವಂತಾಗಬೇಕು. ಜೀವನದಲ್ಲಿ ನಂಬಿಕೆ, ನಮೃತೆ ಮತ್ತು ವಿನಯಗಳನ್ನು ಮೈಗೂಡಿಕೊಳ್ಳಬೇಕು.

ಮೌಲ್ಯಗಳಿಗೆಲ್ಲ ನೀತಿಯೇ ಮೂಲಬೀಜ. ನಡೆನುಡಿ, ಆಚಾರ ವಿಚಾರಗಳಲ್ಲಿ ನೈತಿಕತೆಯನ್ನು ಮೇಳೈಸಿಕೊಂಡಾಗ ಬದುಕಿಗೊಂದು ಅರ್ಥ ಪ್ರಾಪ್ತವಾಗುತ್ತದೆ. ನೈತಿಕತೆಯು ಭಾರತೀಯ ಧರ್ಮ, ತತ್ವ-ಸಿದ್ಧಾಂತಗಳ, ರಾಜ ಮಹಾರಾಜರ, ದಾರ್ಶನಿಕರ, ದೇಶದ ನಾಯಕರ ಉತ್ಕಟೇಚ್ಛೆಯಾಗಿದೆ. ವಿವೇಕಾನಂದರ ಉದಾತ್ತ ಧ್ಯೇಯ ಧೋರಣೆಗಳನ್ನು ಪಾಲಿಸುವುದರೊಂದಿಗೆ ವ್ಯಕ್ತಿತ್ವ ನಿರ್ಮಾಣದಲ್ಲಿ ಗಟ್ಟಿತನವನ್ನು ರೂಪಿಸಿಕೊಳ್ಳಬೇಕು.

ಆಧುನಿಕ ತಂತ್ರಜ್ಞಾನ ಅವಿರತವಾಗಿ ಮುಂದುವರಿಯುತ್ತಿರುವ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸಮೂಹ ಮಾಧ್ಯಮಗಳನ್ನು ನಕಾರಾತ್ಮಕವಾಗಿ ಬಳಸದೆ ರಾಷ್ಟ್ರದ ಅಭಿವೃದ್ಧಿಯ ಕಾರ್ಯಕ್ಕೆ ವಿನಿಯೋಗಿಸಬೇಕು ಎಂದು ಹೇಳಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ. ಮಾತನಾಡಿ ಪರೀಕ್ಷೆಯನ್ನು ಗೆದ್ದಂತೆ ವಿದ್ಯಾರ್ಥಿಗಳು ಬದುಕನ್ನು ಗೆಲ್ಲಬೇಕು. ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ವಿದ್ಯಾರ್ಥಿಗಳ ಸಾಧನೆಗೆ ಎತ್ತಿ ಹಿಡಿದ ಕನ್ನಡಿ. ವಿದ್ಯಾರ್ಥಿಗಳ ಈ ಪ್ರತಿಭೆಯು ಸಮಾಜದ ಸುಖಕ್ಕೆ ಉಪಯೋಗಬೇಕು. ಸಹಜ ಕಲಿಕೆಯ ಖುಷಿಯನ್ನು ಅನುಭವಿಸಬೇಕು. ತಮ್ಮ ಯಶಸ್ಸಿಗೆ ಕಾರಣರಾದ ವ್ಯಕ್ತಿಗಳನ್ನು ನಾವು ಎಂದೂ ಮರೆಯಬಾರದು.

ಶಿಕ್ಷಣದ ಎಲ್ಲ ಆಯಾಮಗಳನ್ನು ಗ್ರಹಿಸುವ ಸಾಮರ್ಥ್ಯವನ್ನು ಪಡೆಯಬೇಕು. ಶಿಕ್ಷಣ ಮತ್ತು ಸಂಸ್ಕಾರ ಬೇರೆಬೇರೆಯಾಗಿರದೇ ಶಿಕ್ಷಣವೇ ಸಂಸ್ಕಾರವಾಗಿರಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯು ಸಮಾಜದಲ್ಲಿ ಹೊಳೆಯುವ ವಜ್ರಗಳಾಗಿ ರೂಪುಗೊಳ್ಳಬೇಕು ಎಂದು ನುಡಿದರು. ವಿಶೇಷ ಸನ್ಮಾನ: ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗಗಳು ಸೇರಿದಂತೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡ 224 ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ರಾಷ್ಟ್ರಮಟ್ಟದ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 4273 ನೇ ರ‍್ಯಾಂಕ್, ಇಂಜಿನಿಯರಿಂಗ್ ನಲ್ಲಿ 9ನೇ ರ‍್ಯಾಂಕ್ ಮತ್ತು ಫಾರ್ಮಾದಲ್ಲಿ 10 ನೇ ರ‍್ಯಾಂಕ್ ಗಳಿಸಿದ ಗೌರೀಶ್ ಕಜಂಪಾಡಿ, ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 39 ನೇ ರ‍್ಯಾಂಕ್, ವೆಟರ್ನರಿಯಲ್ಲಿ 127ನೇ ರ‍್ಯಾಂಕ್,ಫಾರ್ಮಾದಲ್ಲಿ 217ನೇ ರ‍್ಯಾಂಕ್, ನ್ಯಾಚುರೋಪತಿ ವಿಭಾಗದಲ್ಲಿ 63ನೇ ರ‍್ಯಾಂಕ್ ಮತ್ತು ಇಂಜಿನಿಯರಿಂಗ್ ನಲ್ಲಿ 364ನೇ ರ‍್ಯಾಂಕ್ ,ನೀಟ್ ಪ್ರವೇಶ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 5352 ನೇ ರ‍್ಯಾಂಕ್ ಗಳಿಸಿದ ಅಕ್ಷಯ್ ಪಾಂಗಾಳ್, ನೀಟ್ ಪ್ರವೇಶ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 58462 ನೇ ರ‍್ಯಾಂಕ್, ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 1033 ನೇ ರ‍್ಯಾಂಕ್ ಮತ್ತು ನ್ಯಾಚುರೋಪತಿ ವಿಭಾಗದಲ್ಲಿ 1220ನೇ ರ‍್ಯಾಂಕ್ ಗಳಿಸಿದ ಶಮಾ ಕೆ, ನೀಟ್ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 41409 ನೇ ರ‍್ಯಾಂಕ್ ಗಳಿಸಿದ ಅಂಜಲಿ, ನೀಟ್ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 21267 ನೇ ರ‍್ಯಾಂಕ್ ,ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 895 ನೇ ರ‍್ಯಾಂಕ್ ಮತ್ತು ನ್ಯಾಚುರೋಪತಿ ವಿಭಾಗದಲ್ಲಿ 1454ನೇ ರ‍್ಯಾಂಕ್ ಗಳಿಸಿದ ಬಿ. ಎನ್. ಈಶ್ವರ ಪ್ರಸನ್ನ, ಇಂಜಿನಿಯರಿಂಗ್ ನಲ್ಲಿ 1226ನೇ ರ‍್ಯಾಂಕ್ ಗಳಿಸಿದ ನಿಶಾ ಎಂ.ಎಸ್, ಇಂಜಿನಿಯರಿಂಗ್ ನಲ್ಲಿ 1356ನೇ ರ‍್ಯಾಂಕ್ ಗಳಿಸಿದ ಸಾಕ್ಷಾತ್ ಎಸ್ ಎಂ, ಆರ್ಕಿಟೆಕ್ಚರ್ ಇಂಜಿನಿಯರಿಂಗ್‌ಗಾಗಿ ನಡೆದ ರಾಷ್ಟ್ರ ಮಟ್ಟದ ಫಲಿತಾಂಶದಲ್ಲಿ 174 ನೇ ರ‍್ಯಾಂಕ್ ಗಳಿಸಿದ ಮೊನಾ ಎಸ್ ಟಿ, ದ್ವಿತೀಯ ವಾರ್ಷಿಕ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ರಾಜ್ಯದಲ್ಲಿ ಆರನೇ ರ‍್ಯಾಂಕ್ ಮತ್ತು ತಾಲೂಕಿಗೆ ಹಾಗೂ ಕಾಲೇಜಿನಲ್ಲಿ ಪ್ರಥಮ ಸ್ಥಾನ ಮತ್ತು ನ್ಯಾಚುರೋಪತಿ ವಿಭಾಗದಲ್ಲಿ 1082ನೇ ರ‍್ಯಾಂಕ್ ಗಳಿಸಿದ ವಿಜಿತ್ ಕೃಷ್ಣ, ವಿಜ್ಞಾನ ವಿಭಾಗದಲ್ಲಿ ರಾಜ್ಯದಲ್ಲಿ ಏಳನೇ ರ‍್ಯಾಂಕ್ ಗಳಿಸಿದ ಅಂಕಿತಾ ಸಿ, ವಾಣಿಜ್ಯ ವಿಭಾಗದಲ್ಲಿ ರಾಜ್ಯದಲ್ಲಿ ಎಂಟನೇ ರ‍್ಯಾಂಕ್ ಹಾಗೂ ಕಾಲೇಜಿನಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ ವರಲಕ್ಷ್ಮಿ ಪಿ ಎಸ್, ಕಲಾ ವಿಭಾಗದಲ್ಲಿ ಕಾಲೇಜಿನಲ್ಲಿ ಪ್ರಥಮ ಸ್ಥಾನ ಗಳಿಸಿದ ವಿರೇಶ ಇವರನ್ನು ಶಾಲು ಹೊದಿಸಿ ವಿಶೇಷವಾಗಿ ಸನ್ಮಾನಿಸಲಾಯಿತು.

ನಂತರ ವಿದ್ಯಾರ್ಥಿಗಳಾದ ಅಕ್ಷಯ್ ಪಾಂಗಳ್ ಮತ್ತು ವರಲಕ್ಮೀ ಪಿ.ಎಸ್ ಮಾತನಾಡಿ ಈ ಕಾಲೇಜಿನಲ್ಲಿ ದೊರೆತ ನಿರಂತರ ಪ್ರೋತ್ಸಾಹವೇ ನಮ್ಮ ಯಶಸ್ಸಿಗೆ ಕಾರಣ. ಉಪನ್ಯಾಸಕರ ಪಠ್ಯಕ್ರಮ, ಸಲಹೆ ಸೂಚನೆಗಳು ನಮ್ಮಲ್ಲಿ ಆತ್ಮವಿಶ್ವಾಸವನ್ನು ಮೂಡಿಸಲು ಸಹಕಾರಿಯಾಗಿವೆ. ಉತ್ತಮ ಶಿಕ್ಷಣವನ್ನು ನೀಡಿದ ವಿದ್ಯಾಸಂಸ್ಥೆ, ಗುರುಹಿರಿಯರು ಮತ್ತು ಪ್ರೋತ್ಸಾಹಿಸಿದ ಹೆತ್ತವರಿಗೆ ಕೃತಜ್ಞನಾಗಿದ್ದೇನೆ ಎಂದು ಅಭಿಪ್ರಾಯಪಟ್ಟರು.ಯಕ್ಷ ಕವನ- ಪ್ರತಿಭಾ ನಮನ:ವಿದ್ಯಾರ್ಥಿಗಳು ಪ್ರತಿಭಾನ್ವಿತರಾಗಿ ರೂಪುಗೊಳ್ಳಲು ಕಲಿತ ಸಂಸ್ಥೆ, ಪೋಷಣೆ ನೀಡಿದ ಪೋಷಕರು, ಮಾರ್ಗದರ್ಶನ ನೀಡಿದ ಗುರುಗಳ ತ್ಯಾಗ ಇದೆ. ಇದನ್ನು ವಿದ್ಯಾರ್ಥಿಗಳಿಗೆ ನೆನಪಿಸಿ ಜೀವನದಲ್ಲಿ ನೈತಿಕತೆಯನ್ನು ರೂಪಿಸಿಕೊಳ್ಳಲು ಅಭಿನಂದನೆಯ ಜೊತೆ ಮಾರ್ಗದರ್ಶನವನ್ನು ಯಕ್ಷಗಾನದ ಹಾಡಿನ ಮೂಲಕ ಪ್ರಸ್ತುತ ಪಡಿಸಲಾಯಿತು. ವಿದ್ಯಾರ್ಥಿಗಳಾದ ಹೇಮಸ್ವಾತಿ, ಶ್ರೇಯಾ, ಅಂಬಾತನಯ, ನವೀನ್‌ಕೃಷ್ಣ ಇವರು ಹಿಮ್ಮೇಳದಲ್ಲಿ ಸಹಕರಿಸಿದರು. ಪರಿಕಲ್ಪನೆ ಮತ್ತು ಸಾಹಿತ್ಯವನ್ನು ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀಧರ ಶೆಟ್ಟಿಗಾರ್ ರವರ ಮಾರ್ಗದರ್ಶನದಲ್ಲಿ ಮೂಡಿಬಂತು.ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯೆ ವತ್ಸಲಾ ರಾಜ್ಞಿ , ರವಿ ಮುಂಗ್ಲಿಮನೆ, ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿ. ಜಿ. ಭಟ್ , ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರಉಪಸ್ಥಿತರಿದ್ದರು. ಕಾಲೇಜಿನ ಆಂಗ್ಲ ವಿಭಾಗದ ಮುಖ್ಯಸ್ಥರಾದ ಪರಮೇಶ್ವರ ಶರ್ಮ ಸ್ವಾಗತಿಸಿ ಪ್ರಾಸ್ತವಿಕ ನುಡಿಗಳನ್ನಾಡಿದರು. ಉಪನ್ಯಾಸಕಿ ಹರ್ಷಿತಾ ಕಾರ್ಯಕ್ರಮವನ್ನು ನಿರೂಪಿಸಿ ಚೈತ್ರ ವಂದಿಸಿದರು.

Advertisement
Previous Post

ಮತ್ತೆ ಚಿರತೆ ಭೇಟಿ- ಭಯಹುಟ್ಟಿಸುತಿದೆ ಕಾಡಚಿರತೆ ದೃಶ್ಯ

Next Post

ಗ್ರಾ. ಪಂ. ಚುನಾವಣಾ ಪೈಪೋಟಿಯಲ್ಲಿ ಗೆಲುವಿನ ಪಟ್ಟ ಭಾಜಪಾ’ಗೆ- ಬೂಡಿಯಾರು ರಾಧಾಕೃಷ್ಣ ರೈ

OtherNews

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!
Featured

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026
09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!
ಪುತ್ತೂರು

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

February 14, 2026
ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ
ಪುತ್ತೂರು

ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

February 13, 2026
ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!
ಪುತ್ತೂರು

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

February 13, 2026
ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!
ಪುತ್ತೂರು

ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

February 11, 2026
(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!
ಉದ್ಘಾಟನೆ

(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

February 11, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026
ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

February 15, 2026
ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

February 15, 2026
09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

February 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page