ಪುತ್ತೂರು: ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್ ಸುಧಾಕರ್ ಶೆಟ್ಟಿ ಯವರನ್ನು ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಟಿ ಶೆಟ್ಟಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಯವರು ಭೇಟಿಯಾಗಿ ಬ್ಲಾಕ್ ಕಾಂಗ್ರೆಸ್ ನಡೆಸುತ್ತಿರುವ ಪಕ್ಷ ಸಂಘಟನೆಯ ಬಗ್ಗೆ ವಿವರಿಸಿದರು ಮತ್ತು ಪ್ರಿಯದರ್ಶಿನಿ ಟ್ರಸ್ಟ್ ರಚನೆ ಬಗ್ಗೆ ಚರ್ಚೆ ನಡೆಸಿದರು ಹಾಗೂ ಆ.30 ರಂದು ನಡೆಯುವ ಬ್ಲಾಕ್ ಕಾಂಗ್ರೆಸ್ ನ ಮಾಸಿಕ ಸಭೆಗೆ ಆಹ್ವಾನಿಸಿದರು.

ಎನ್ ಸುಧಾಕರ್ ಶೆಟ್ಟಿ ರವರು ಬ್ಲಾಕ್ ಕಾಂಗ್ರೆಸ್ ಒಳ್ಳೆಯ ರೀತಿಯಲ್ಲಿ ಕೆಲಸ ಕಾರ್ಯ ನಿರ್ವಹಿಸುತ್ತಿದೆ, ನಿಮ್ಮ ಎಲ್ಲಾ ಕೆಲಸ ಕಾರ್ಯಗಳಿಗೆ ನನ್ನ ನೈತಿಕ ಬೆಂಬಲ ಇದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಆಲಿ, ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ವಿ ಎಚ್ ಎ ಶಕೂರ್ ಹಾಜಿ, ಬ್ಲಾಕ್ ಕಾರ್ಮಿಕ ಘಟಕದ ಅಧ್ಯಕ್ಷ ಶರೊನ್ ಸಿಕ್ವೆರಾ, ಬ್ಲಾಕ್ ಕಾರ್ಯದರ್ಶಿ ಮನ್ಮೋಹನ್ ರೈ ಉಪಸ್ಥಿತರಿದ್ದರು.