ಮೈಸೂರು: ಸಾಂಸ್ಕೃತಿಕ ನಗರದಲ್ಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂತ್ರಸ್ತೆಗೆ ಆಗಿರೋ ದುರ್ಘಟನೆಯಿಂದ ಇನ್ನೂ ಹೊರಬಾರದೇ, ಶಾಕ್ನಿಂದ ಘಟನೆ ಕುರಿತು ಪೊಲೀಸರ ಬಳಿ ಮಾಹಿತಿ ಹಂಚಿಕೊಳ್ಳಲು ಹಿಂದೇಟು ಹಾಕ್ತಿದ್ದಾರೆ ಎನ್ನಲಾಗಿದೆ. ಶಾಕ್ನಿಂದ ಮೊದಲು ಹೊರಬರಲು ಅವಕಾಶ ನೀಡುವಂತೆ, ಪೊಲೀಸ್ ಅಧಿಕಾರಿಗಳಲ್ಲಿ ಸಂತ್ರಸ್ತ ಯುವತಿ ಮನವಿ ಮಾಡಿದ್ದಾರೆ. ಅಲ್ಲದೇ.. ಇನ್ನೆರಡು ದಿನದ ಬಳಿಕ ಘಟನೆ ಬಗ್ಗೆ ವಿವರಿಸುತ್ತೇನೆ, ಅಲ್ಲಿಯವರೆಗೂ ನನ್ನ ಪಾಡಿಗೆ ನನ್ನ ಬಿಟ್ಟು ಬಿಡಿ ಅಂತ ಸಂತ್ರಸ್ತ ಯುವತಿ ಪೊಲೀಸರಲ್ಲಿ ಮನವಿ ಮಾಡಿದ್ದಾರಂತೆ. ಯುವತಿ ಸ್ನೇಹಿತ ಪೊಲೀಸರಿಗೆ ನೀಡಿದ ಹೇಳಿಕೆ ಲಭ್ಯವಾಗಿದ್ದು, ಸಂತ್ರಸ್ತ ಯುವತಿ ಸ್ನೇಹಿತ ಘಟನೆ ಕುರಿತು ಪೊಲೀಸರ ಬಳಿ ಎಫ್ಐಆರ್ ನಲ್ಲಿ ಹೇಳಿಕೆ ದಾಖಲಿಸಿದ್ದಾನೆ. ಸ್ನೇಹಿತನ ಹೇಳಿಕೆ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಂತ್ರಸ್ತ ಯುವತಿ ಸ್ನೇಹಿತ ಹೇಳಿದ್ದೇನು..?
ಆಗಸ್ಟ್ 24ರ ಸಂಜೆ 7.25 ರಿಂದ 7.30ರ ಸುಮಾರಿಗೆ ನಾನು ಸಂತ್ರಸ್ತ ಯುವತಿ ತರಗತಿ ಮುಗಿಸಿಕೊಂಡು ಜೆಎಸ್ಎಸ್ ಆಯುರ್ವೇದಿಕ್ ಕಾಲೇಜಿನ ಮುಂದೆ ವಾಟರ್ ಟ್ಯಾಂಕ್ ಬಳಿಯ ಕಚ್ಚಾ ರಸ್ತೆಯಲ್ಲಿ ಹೋಗುತ್ತಿದ್ದೆವು. ನಾನು ಯಾವಾಗಲೂ ಜಾಗಿಂಗ್ಗೆ ಹೋಗುವ ಸ್ಥಳ ಅದಾಗಿತ್ತು. ಅಲ್ಲಿ ಹೋಗಿ ಬೈಕ್ ನಿಲ್ಲಿಸಿದಾಗ 25 ರಿಂದ 30 ವರ್ಷದ ಸುಮಾರು 6 ಮಂದಿ ನಮ್ಮ ಬಳಿ ಆಗಮಿಸಿದರು.
ಬಳಿಕ ಬಲ ಭಾಗದಿಂದ ಏಕಾಏಕಿ ಬಂದು ದೊಣ್ಣೆಯಿಂದ ಹಲ್ಲೆ ಮಾಡಿದರು. ನಂತರ ನನ್ನನ್ನು ತಳ್ಳಿ ಜೊತೆಯಲ್ಲಿದ್ದವಳನ್ನು ಪೊದೆಗಳಿರುವ ಜಾಗಕ್ಕೆ ಎಳೆದುಕೊಂಡು ಹೋದರು. ಅದರಲ್ಲಿ ತೆಳ್ಳಗಿರುವ ಒಬ್ಬ ನನ್ನ ಹಣೆಗೆ ಕಲ್ಲಿನಿಂದ ಹೊಡೆದ. ಹೊಡೆದ ಪರಿಣಾಮ ನಾನು ಪ್ರಜ್ಞೆ ತಪ್ಪಿ ಬಿದ್ದಿದ್ದು, 15 ನಿಮಿಷದ ನಂತರ ಪ್ರಜ್ಞೆ ಬಂತು. ಆಗ 4 ಜನ ನನ್ನ ಮುಂದೆ ನಿಂತು ನನ್ನ ತಂದೆಗೆ ಕಾಲ್ ಮಾಡಿಸಿದರು. 3 ಲಕ್ಷ ಹಣ ಕೊಡುವಂತೆ ಒತ್ತಾಯ ಮಾಡಿದರು ಎಂದು ಹೇಳಿಕೆ ದಾಖಲಿಸಿದ್ದಾನೆ.
ಜೊತೆಗೆ ನಾನು ಗೆಳತಿ ಎಲ್ಲಿ ಎಂದು ಕೇಳಿದಾಗ ಇಬ್ಬರೂ ಆಕೆಯನ್ನು ಎಳೆದುಕೊಂಡು ಬಂದು ನನ್ನ ಪಕ್ಕ ಕೂರಿಸಿದರು. ಅಷ್ಟೊತ್ತಿಗೆ ಸಂತ್ರಸ್ತ ಯುವತಿ ತೀವ್ರವಾಗಿ ಗಾಯಗೊಂಡು ನಿತ್ರಾಣ ಸ್ಥಿತಿ ತಲುಪಿದ್ದಳು. ಅವಳಿಗೆ ತರಚಿದ ಗಾಯಗಳಾಗಿದ್ದವು. ಎಂದು ಸಂತ್ರಸ್ತ ಯುವತಿ ಸ್ನೇಹಿತ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.
ಇನ್ನೂ, ಇಂದು ಘಟನಾ ಸ್ಥಳಕ್ಕೆ ಗೃಹ ಸಚಿವ ಅರಗ ಜ್ಞಾನೆಂದ್ರ ಭೇಟಿ ನೀಡಿ, ಪ್ರಕರಣ ಸಂಬಂಧ ಮಾಹಿತಿ ಸಂಗ್ರಹಿಸಲಿದ್ದಾರೆ. ಇಂಥ ಕೃತ್ಯ ಎಸಗಿರೋ, ದುರುಳರ ಪತ್ತೆಗೆ ಪೊಲೀಸರಿಗೆ ಒತ್ತಡ ಹೆಚ್ಚಿದೆ.