ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞರಾದ ಶಿರ್ವ ಮಂಚಕಲ್ಲು ನಿವಾಸಿ ಡಾ.ಸಂದೀಪ್ ರವರು ಅನಾರೋಗ್ಯದ ಕಾರಣದಿಂದಾಗಿ ಮಂಗಳೂರಿನಲ್ಲಿ ಆ.27 ರಂದು ರಾತ್ರಿ ನಿಧನರಾದರು.
ಕಳೆದ ಹಲವಾರು ವರ್ಷಗಳಿಂದ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಹಾಗೂ ಪ್ರಸೂತಿ ತಜ್ಞರಾಗಿದ್ದ ಇವರು ಒಂದಷ್ಟು ವರ್ಷಗಳ ಕಾಲ ಇಲ್ಲಿನ ಆಸ್ಪತ್ರೆಯ ಆಡಳಿತಾಧಿಕಾರಿಯಾಗಿ ಕೂಡ ಕರ್ತವ್ಯ ನಿರ್ವಹಿಸಿದ್ದರು. ಆ ಬಳಿಕ ಅವರು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ವರ್ಗಾವಣೆಗೊಂಡಿದ್ದರು . ಜ .25, 2019ರಿಂದ ಮತ್ತೆ ಪುತ್ತೂರಿಗೆ ವರ್ಗಾವಣೆಗೊಂಡು ಕರ್ತವ್ಯ ನಿರ್ವಹಿಸುತಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು ಗರ್ಭಿಣಿಯರಿಗೆ ಹೆರಿಗೆ ಮಾಡಿಸಿದ ಖ್ಯಾತಿಯನ್ನು ಹೊಂದಿದ್ದರು . ಸಿಸೇರಿಯನ್ ಹೆರಿಗೆ ಮಾಡಿಸುವುದರಲ್ಲಿ ಇವರು ನಿಷ್ಣಾತರಾಗಿದ್ದರು.
ಮೃತರು ಹೆಂಡತಿ, ಮಗ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.