ಪುತ್ತೂರು: ರಾಯಚೂರು ಮೂಲದ ಹಿಂದೂ ಯುವಕ ಪುತ್ತೂರು ಮೂಲದ ಅನ್ಯಕೋಮಿನ ಯುವತಿಯರು ಮತ್ತು ಹಿಂದೂ ಯುವತಿ ಜೊತೆ ಪುತ್ತೂರಿನ KSRTC ಬಸ್ ನಿಲ್ದಾಣದಲ್ಲಿ ಬೇಟಿಯಾಗಿ ಪಕ್ಕದ ಲಾಡ್ಜ್ ನಲ್ಲಿ ರೂಮ್ ಬುಕ್ ಮಾಡಲು ತೆರಳಿದ್ದು ಈ ಬಗ್ಗೆ ತಿಳಿದ ಅನ್ಯಕೋಮಿನ ಯುವಕರು ಹಿಂದೂ ಯುವಕರನ್ನೂ ತರಾಟೆಗೆ ತೆಗೆದುಕೊಂಡು ಹಲ್ಲೆ ನಡೆಸಲು ಮುಂದಾದ ಘಟನೆ ಸ.1 ರಂದು ಪುತ್ತೂರಿನಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿ ಯಾಗುತ್ತಿದ್ದಂತೆ KSRTC ಸಿಬ್ಬಂದಿಗಳು ಅವರನ್ನು ಆಟೋ ಮೂಲಕ ಪೊಲೀಸ್ ಠಾಣೆಗೆ ಹೋಗಲು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಇನ್ಸ್ಟಾಗ್ರಾಮ್ ಮೂಲಕ ರಾಯಚೂರು ಮೂಲದ ಹಿಂದೂ ಯುವಕರಿಗೆ ಪುತ್ತೂರು ಮೂಲದ ಅನ್ಯಕೋಮಿನ ಯುವತಿಯರ ಪರಿಚಯವಾಗಿದ್ದು ಅವರನ್ನು ಭೇಟಿ ಮಾಡಲು ಇಂದು ಪುತ್ತೂರಿಗೆ ಬಂದಿದ್ದರು ಎನ್ನಲಾಗಿದೆ.ಸದ್ಯ ಪುತ್ತೂರು ನಗರ ಪೊಲೀಸರು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.