ಬಂಟ್ವಾಳ: ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾ.ಪಂ.ವ್ಯಾಪ್ತಿಯ ವಿಜಯೋತ್ಸವದ ವೇಳೆ ವಾಹನ ಪಲ್ಟಿಯಾಗಿ ಓರ್ವ ಮೃತಪಟ್ಟ ಘಟನೆ ಬುಧವಾರ ನೆಟ್ಲದಲ್ಲಿ ನಡೆದಿದೆ.
![](https://zoomintv.online/wp-content/uploads/2020/12/IMG_20201231_090517.jpg)
ನೆಟ್ಲ ನಿವಾಸಿ ನರೇಶ್(೩೦) ಮೃತ ವ್ಯಕ್ತಿ. ಘಟನೆಯಲ್ಲಿ ವಿಜೇತ ಅಭ್ಯರ್ಥಿ ದೀಪಕ್, ಜಗನ್ನಾಥ, ಗುರುವಪ್ಪ, ಸುಚಿತ್ರಾ, ನಳಿನಿ, ಯೋಗೀಶ್ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.ಗೋಳ್ತಮಜಲು ಗ್ರಾ.ಪಂ.ವ್ಯಾಪ್ತಿಯ ನೆಟ್ಲ ಭಾಗದ ವಿಜಯೋತ್ಸವದ ವೇಳೆ ಘಟನೆ ನಡೆದಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.