ಪುತ್ತೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪುತ್ತೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಯವರ ಕಚೇರಿಯಲ್ಲಿ ಹಿರಿಯ ಮೇಲ್ವಿಚಾರಕಿಯಾಗಿದ್ದ ಭಾರತಿ ಜೆ. ಎ ರವರು ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿಯಾಗಿ ಭಡ್ತಿ ಪಡೆದಿದ್ದಾರೆ.
ಇಳಂತಿಲ ಗ್ರಾಮದ ನೇಜಿಗಾರು ನಿವಾಸಿ ಟಿ. ಹರಿನಾರಾಯಣ ಭಟ್ ರವರ ಭಾರತಿರವರು 1986 ರಿಂದ ಮೇಲ್ವಿಚಾರಕಿಯಾಗಿ 1990 ವರೆಗೆ ಮೈಸೂರು ಜಿಲ್ಲೆ ಹೆಗ್ಡೆದೇವನಕೋಟೆ ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸಿದ್ದರು.
1991 ರಿಂದ 1998 ರವರೆಗೆ ಸುಳ್ಯ ತಾಲೂಕಿನಲ್ಲಿ, 1998 ರಿಂದ 2011 ರವರೆಗೆ ಪುತ್ತೂರು ತಾಲೂಕಿನಲ್ಲಿ,2012 ರಿಂದ 2016 ರವರೆಗೆ ಬೆಳ್ತಂಗಡಿಯಲ್ಲಿ ಕಾರ್ಯ ನಿರ್ವಹಿಸಿದ್ದ ಇವರು 2016 ರಲ್ಲಿ ಹಿರಿಯ ಮೇಲ್ವಿಚಾರಕಿಯಾಗಿ ಮುಂಬಡ್ತಿ ಹೊಂದಿ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ಮತ್ತು 2019 ರಿಂದ ಪುತ್ತೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿ ಮುಂಬಡ್ತಿ ಹೊಂದಿ ಪುತ್ತೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.