ವಿಟ್ಲ: ಕೇಂದ್ರ ಮಟ್ಟದ ಅಭಿಯಾನ ಮಾಸಾಚರಣೆ ಹಾಗೂ ಪೌಷ್ಟಿಕ ಆಹಾರ ಸಪ್ತಾಹವನ್ನು ಸೆ.8 ರಂದು ಮೈರ ಅಂಗನವಾಡಿ ಕೇಂದ್ರದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀಮತಿ ಮೋಹಿನಿ ರವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಗಜೀವನ್ ರಾಮ್ ಶೆಟ್ಟಿ ಹಾಗೂ ಪುರುಷೋತ್ತಮ ಕಲ್ಲಂಗಳ ಹಾಗೂ ವಿಶಾಲಾಕ್ಷಿ ಆಗಮಿಸಿದ್ದರು.
ಲತಾ ಲೋಕೇಶ್ ರವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಶಿ.ಅ.ಯೋ. ವಿಟ್ಲ ಇದರ ಮೇಲ್ವಿಚಾರಕಿ ಸೋಮಕ್ಕ ಇವರು ಪ್ರಾಸ್ತವಿಕವಾಗಿ ಮಾತನಾಡಿ, ಯೋಜನೆಯ ಸವಲತ್ತಿನ ಬಗ್ಗೆ ತಿಳಿಸಿದರು. ಬಳಿಕ ಪೌಷ್ಟಿಕ ಗಿಡ ನೆಡುವ ಕಾರ್ಯಕ್ರಮ ನಡೆಸಲಾಯಿತು.
ಆರೋಗ್ಯ ಕಾರ್ಯಕರ್ತೆ ಶ್ರೀಮತಿ ಮಮತ ಕೆ. ಆರೋಗ್ಯದ ಬಗ್ಗೆ ಸ್ವಚ್ಛತೆಯ ಬಗ್ಗೆ ಮಾಹಿತಿ ನೀಡಿದರು. ಸಾಂತ್ವನ ಕೇಂದ್ರದ ಆಪ್ತ ಸಮಾಲೋಚಕಿ ಗೀತಾಶ್ರೀ ಮಕ್ಕಳ ಹಾಗೂ ಮಹಿಳೆಯರು ದೌರ್ಜನ್ಯದ ಬಗ್ಗೆ ಉದ್ಯೋಗ ಖಾತರಿ ಯೋಜನೆ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಾತೃ ವಂದನಾ ಅರ್ಜಿಯನ್ನು ಅರ್ಜಿಯನ್ನು ಮೇಲ್ವಿಚಾರಕಿಯರಿಗೆ ನೀಡಲಾಯಿತು.25 ಬಗೆಯ ತಿಂಡಿಗಳನ್ನು ತಾಯಂದಿರು ತಯಾರಿಸಿ ಪ್ರದರ್ಶನಕ್ಕಿಟ್ಟರು. ಮೈರ ಅಂಗನವಾಡಿ ಕೇಂದ್ರದಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮವನ್ನು ಕೂಡ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಬಾಲ ವಿಕಾಸ ಸಮಿತಿಯ ಅಧ್ಯಕ್ಷರು, ಸದಸ್ಯರು, ಆಶಾಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಗುಂಪಿನ ಸದಸ್ಯರು, ಅಂಗನವಾಡಿ ಸಹಾಯಕಿ, ಮಕ್ಕಳ ಪೋಷಕರು, ಕಿಶೋರಿಯರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಅನುಸೂಯ ಸ್ವಾಗತಿಸಿ, ಧನ್ಯವಾದ ಸಮರ್ಪಿಸಿದರು.