ಉದನೆ: ತಡ ರಾತ್ರಿ ಯಾರೋ ಕಿಡಿಗೇಡಿಗಳು ಗಣಪತಿ ಕಟ್ಟೆಯನ್ನು ಪುಡಿ ಮಾಡಿದ ಘಟನೆ ಕಡಬ ತಾಲೂಕಿನ ಉದನೆಯಲ್ಲಿ ನಡೆದಿದ್ದು, ಘಟನಾ ಸ್ಥಳಕ್ಕೆ ಹಿಂದೂ ಜಾಗರಣ ವೇದಿಕೆಯ ಮುಖಂಡರು ಭೇಟಿ ನೀಡಿ ಕೃತ್ಯದ ಬಗ್ಗೆ ತೀವ್ರ ಖಂಡನೆ ವ್ಯಕ್ತ ಪಡಿಸಿದ್ದಾರೆ.
ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಇಲ್ಲವಾದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ತಾಲೂಕು ಅಧ್ಯಕ್ಷ ಮಲ್ಲೇಶ್ ಅಲಂಕಾರು ತಿಳಿಸಿದರು.
ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ಕಡಬ ತಾಲೂಕು ಅಧ್ಯಕ್ಷ ಮಲ್ಲೇಶ್ ಆಲಂಕಾರು,ಕಾರ್ಯದರ್ಶಿ ಹರೀಶ್, ಹಿಂದೂ ಮುಖಂಡ ಕಿಶೋರ್ ಶಿರಾಡಿ, ಭರತ್ ಉದನೆ ಇನ್ನಿತರರು ಉಪ್ಥಿತರಿದ್ದರು.