ಮಂಗಳೂರು: ಭಾನುವಾರ ಬೆಳಗ್ಗೆ ನಂಬರ್ ಪ್ಲೇಟ್ ಇಲ್ಲದ ರಿಡ್ಜ್ ಕಾರಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಅಪ್ಪರ್ ಬೆಂದೂರ್ವೇಲ್ ನಲ್ಲಿರುವ ಸೈಂಟ್ ಆಗ್ನೇಸ್ ಕಾಲೇಜಿನ ಗೇಟಿನ ಮುಂಭಾಗ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬಳ ಬ್ಯಾಗನ್ನು ಕಿತ್ತುಕೊಳ್ಳಲು ಪ್ರಯತ್ನಿಸಿದ ಘಟನೆ ನಡೆದಿದೆ.
ಬ್ಯಾಗನ್ನು ಕಿತ್ತುಕೊಳ್ಳಲು ಪ್ರಯತ್ನಿಸಿದಾಗ ಮಹಿಳೆ ಪ್ರತಿರೋಧ ಒಡ್ಡಿದ್ದು, ಅಲ್ಲಿದ್ದ ಸಾರ್ವಜನಿಕರು ದುಷ್ಕರ್ಮಿಗಳನ್ನು ಹಿಡಿಯುವ ಪ್ರಯತ್ನ ಮಾಡಿದಾಗ ಅವರುಗಳು ಅಲ್ಲಿಂದ ತಪ್ಪಿಸಿಕೊಂಡು ಅದೇ ಕಾರಿನಲ್ಲಿ ಪರಾರಿಯಾಗಿದ್ದು, ಈ ಘಟನೆ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇನ್ನು ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಂಗಳೂರು ಸಿಟಿ ಪೊಲೀಸ್ ಕಮಿಷನರ್ ಶಶಿಕುಮಾರ್ ನಗರ ದಲ್ಲಿ ಹೆಚ್ಚುತ್ತಿರುವ ಕಳ್ಳತನ ವನ್ನು ನಿಯಂತ್ರಿಸಲು ನಡೆದ ಅನುಕು ಪ್ರದರ್ಶನ ಇದಾಗಿದ್ದು ಇಂತಹ ಸಂದರ್ಭದಲ್ಲಿ ಯಾವ ತರಹ ತಮ್ಮನ್ನು ತಾವು ರಕ್ಷಣೆ ಮಾಡಬಹುದು ಎಂದು ಇದರಲ್ಲಿ ತೋರಿಸಲಾಗಿದೆ.