ಬೆಳ್ತಂಗಡಿ :ಬಿಜೆಪಿ ಕಾರ್ಯಕರ್ತ ಪವನ್ ಶೆಟ್ಟಿಯ ಮೇಲೆ ಇತ್ತೀಚೆಗೆ ಪಾಕಿಸ್ತಾನ ಜಿಂದಾಬಾದ್ ವಿಚಾರವಾಗಿ ಎಸ್ ಡಿ ಪಿ ಐ ಕಾರ್ಯಕರ್ತರು ಆರೋಪವೊಂದನ್ನು ಮಾಡಿದ ಹಿನ್ನೆಲೆಯಲ್ಲಿ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಗುರುದತ್ ಜಿ ನಾಯಕ್ ಪವನ್ ಮನೆಗೆ ಭೇಟಿ ನೀಡಿ ಮನೆಯವರಿಗೆ ಧೈರ್ಯ ತುಂಬಿದರು.
![](https://zoomintv.online/wp-content/uploads/2021/01/IMG-20210106-WA0095-1024x461.jpg)
ಯಾವುದೇ ಕಾರಣಕ್ಕೂ ಕಾರ್ಯಕರ್ತರನ್ನ ಬಿಟ್ಟುಕೊಡುವ ಸಂಗತಿ ಇಲ್ಲ ಎಂಬುದಾಗಿ ಭರವಸೆಯ ಮಾತುಗಳನ್ನಾಡಿದರು.ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಯುವ ಮೋರ್ಚಾ ಅಧ್ಯಕ್ಷರಾದ ಯಶವಂತ್ ಗೌಡ ಬೆಳಾಲು, ಪುತ್ತೂರು ಗ್ರಾಮಾಂತರ ಯುವ ಮೋರ್ಚಾ ಕಾರ್ಯದರ್ಶಿ ಆದೇಶ್ ಶೆಟ್ಟಿ, ಹಾಗೂ ಶ್ರವಣ್ ಉಪಸ್ಥಿತರಿದ್ದರು.
![](https://zoomintv.online/wp-content/uploads/2021/01/IMG-20210106-WA0097-1024x461.jpg)