ರಾಷ್ಟೀಯ ನಾಯಕ, ಮಾಜಿ ಸಚಿವ, ರಾಜ್ಯ ಸಭಾ ಸದಸ್ಯ ಓಸ್ಕರ್ ಫೆರ್ನಾಂಡಿಸ್ ರವರು ನಿಧನ ಹೊಂದಿದ್ದು, ಇವರಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ದಾಂಜಲಿ ಸಭೆ ನಡೆಯಿತು.
ಪುತ್ತೂರು ಬ್ಲಾಕ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಯವರ ಅಧ್ಯಕ್ಷತೆಯಲ್ಲಿ ನಡೆದ ಶ್ರದ್ದಾಂಜಲಿ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಅಮಲ ರಾಮಚಂದ್ರ ಮಾತನಾಡಿ ಪಕ್ಷ ನಿಷ್ಠೆಗೆ ಇನ್ನೊಂದು ಹೆಸರೇ ಆಸ್ಕರ್ ಫರ್ನಾಡೀಸ್ ಆಗಿದ್ದರು. ಕೇಂದ್ರ ಸರ್ಕಾರದ ಕಾರ್ಮಿಕ ಖಾತೆಯ ರಾಜ್ಯ ಸಚಿವರಾಗಿ ಮತ್ತು ತದನಂತರ ಭೂಸಾರಿಗೆ, ಹೆದ್ದಾರಿ ಮತ್ತು ಸಾರಿಗೆ ಸಚಿವರಾಗಿ ದೇಶಕ್ಕೆ ಮತ್ತು ರಾಜ್ಯ ಕ್ಕೆ ಅಪಾರ ಕೊಡುಗೆ ನೀಡಿದ್ದಾರೆ,ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಣ್ಣಿನ ಮಗನಾಗಿ ಜಿಲ್ಲೆಯ ಎಲ್ಲಾ ಸಾಂಸ್ಕೃತಿಕ ಮತ್ತು ಪಾರಂಪರಿಕ ಮೌಲ್ಯಗಳನ್ನು ಮೈಗೂಡಿಸಿಕೊಂಡಿದ್ದ ಆಸ್ಕರ್ ಫರ್ನಾಂಡಿಸ್ ರವರು ಯಕ್ಷಗಾನ, ಕೂಚಿಪುಡಿ, ಮೋರ್ಸಿಂಗ್ ಮೊದಲಾದ ಕಲೆಗಳಲ್ಲಿ ನಿಷ್ಣಾತರಾಗಿದ್ದರು ಅವರ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡಿದೆ.ಎಂದು ನುಡಿ ನಮನ ಸಲ್ಲಿಸಿದರು.
ಈ ಶ್ರದ್ದಾಂಜಲಿ ಸಭೆಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಆಲಿ, ಜಿಲ್ಲಾ ಸಹಕಾರಿ ಯೂನಿಯನ್ನಿನ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಬ್ಲಾಕ್ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷರಾದ ವಿ ಎಚ್ ಎ ಶಕೂರ್ ಹಾಜಿ, ಬ್ಲಾಕ್ ಎಸ್ ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್, , ಬ್ಲಾಕ್ ಎಸ್ ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ್ ನೆರಿಮೊಗರು,ಪಂಚಾಯತ್ ರಾಜ್ ಸಂಘಟಣೆಯ ಅಧ್ಯಕ್ಷ ಸಂತೋಷ್ ಭಂಡಾರಿ ಚಿಲ್ಮೆ ತ್ತಾರ್,ಬ್ಲಾಕ್ ಅಸಂಗಟಿತ ಕಾರ್ಮಿಕ ಘಟಕದ ಅಧ್ಯಕ್ಷ ಮೇಲ್ವಿನ್ ಮೊಂತೆರೊ,ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮೌರಿಸ್ ಮಸ್ಕೇರೇನಸ್, ಬ್ಲಾಕ್ ಕಾರ್ಯದರ್ಶಿ ಗಳಾದ ಮನಮೋಹನ್ ರೈ, ಸಿರಿಲ್ ರೋಡ್ರಿಗಸ್, ರೋಷನ್ ರೈ ಬನ್ನೂರು, ಬಾಸ್ಕರ ಕರ್ಕೇರ,ಯಂಗ್ ಬ್ರಿಗೇಡ್ ನ ಪ್ರಹ್ಲಾದ್ ಬೆಳ್ಳಿಪ್ಪಾಡಿ ,ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ಅರಸ್,ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ವಿಶಾಲಾಕ್ಷಿ ಬನ್ನೂರು, ಜಿಲ್ಲಾ ಕಾಂಗ್ರೆಸ್ ಸದಸ್ಯೆ ಸಾಯಿರ ಝುಬೈರ್,ಮಾಜಿ ನಗರ ಸಭಾ ಅಧ್ಯಕ್ಷೆ ಜಯಂತಿ ಬಲ್ನಾಡ್, ಒಳಮೊಗರು ಪಂಚಾಯತ್ ಸದಸ್ಯರಾದ ಶ್ರೀಮತಿ ಚಿತ್ರ, ನೆರಿಮೊಗರು ಪಂಚಾಯತ್ ನ ಮಾಜಿ ಸದಸ್ಯರಾದ ಪೂಜಾ ವಸಂತ,ಮಾಜಿ ಕೆ ಡಿ ಪಿ ಸದಸ್ಯರಾದ ವನಿತಾ ಆಚಾರ್ಯ, ಪಾಣಾಜೆ ವಲಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ರಾದ ಸೀತಾ ಉದಯ ಶಂಕರ್ ಭಟ್ ಚಂಬರಕಟ್ಟ ಮೊದಲಾದವರು ಉಪಸ್ಥಿತರಿದ್ದರು.