ಬಂಟ್ವಾಳ: ಮೈಸೂರಿನ ನಂಜನಗೂಡಿನಲ್ಲಿ ದೇವಸ್ಥಾನವನ್ನು ಕೆಡವಿದ ಘಟನೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡ ಮತ್ತು ವಿಟ್ಲ ಪ್ರಖಂಡದ ವತಿಯಿಂದ ಸೆ.16 ರಂದು ಬಿ.ಸಿ. ರೋಡ್ ತಾಲೂಕು ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ವಿಶ್ವ ಹಿಂದೂ ಪರಿಷದ್ ವಿಟ್ಲ ಪ್ರಖಂಡದ ಕಾರ್ಯದರ್ಶಿ ಚರಣ್ ಕಾಪುಮಜಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.