ಪುತ್ತೂರು: ಬ್ಲಾಕ್ ಕಾಂಗ್ರೆಸ್ ಹಾಗೂ ನೆಟ್ಟಣಿಗೆ ಮೂಡ್ನೂರು ವಲಯ ಕಾಂಗ್ರೆಸ್ ವತಿಯಿಂದ ನೆಟ್ಟಣಿಗೆ ಮೂಡ್ನೂರು ಮಂಡಲ ಪಂಚಾಯತ್ ನ ಪ್ರದಾನರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ವಿಶ್ವನಾಥ ಶೆಟ್ಟಿ (ಬಾಬಣ್ಣ )ಹಾಗೂ ಈಶ್ವರ ಮಂಗಳ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರು ಹಾಗೂ ನಿಕಟ ಪೂರ್ವ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಹಿರಿಯ ಕಾಂಗ್ರೆಸ್ ಮುಖಂಡರಾದ ಮಹಮ್ಮದ್ ಮೇನಾಲ (ಮಿನಿ ಹಟ್ಟಾ)ರವರನ್ನು ಅವರ ಮನೆಯಲ್ಲಿ ಭೇಟಿ ಮಾಡಿ ಸನ್ಮಾನ ಮಾಡಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಹಾಗೂ ನೆಟ್ಟಣಿಗೆ ಮೂಡ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ ಕೆ ಮೂಸಾನ್ ರವರು ಸನ್ಮಾನ ನೆರವೇರಿಸಿದರು.
ಈ ಸಂದರ್ಭದಲ್ಲಿ ನೆಟ್ಟಣಿಗೆ ಮೂಡ್ನೂರು ಗ್ರಾಮ ಪಂಚಾಯತ್ ಸದಸ್ಯ, ಮಾಜಿ ಪಂಚಾಯತ್ ಉಪಾಧ್ಯಕ್ಷ, ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಮ ಪಕ್ಕಳ,ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟಣೆಯ ಅಧ್ಯಕ್ಷ ಸಂತೋಷ್ ಭಂಡಾರಿ ಚಿಲ್ಮೆತ್ತಾರ್,ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ರಾಮ ಮೇನಾಲ,ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಪದಾಧಿಕಾರಿಗಳಾದ ವಿಕ್ರಂ ರೈ ಸಾಂತ್ಯ, ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಹಾಜಿ ಮೇನಾಲ ಉಪಸ್ಥಿತರಿದ್ದರು.