ಕಡಬ: ಠಾಣಾ ವ್ಯಾಪ್ತಿಯ ಕೊಯಿಲದಲ್ಲಿ ಕುಮಾರಧಾರ ನದಿಗೆ ಸ್ನಾನಕ್ಕೆಂದು ತೆರಳಿದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.
ನಾಪತ್ತೆಯಾದ ಚಂದಪ್ಪ ಗೌಡ
ಕಡಬ ತಾಲೂಕಿನ ಕೊಯಿಲ ಗ್ರಾಮದ ಪರಂಗಾಜೆ ನಿವಾಸಿ ಚಂದಪ್ಪ ಗೌಡ ಎಂಬವರು ನಾಪತ್ತೆಯಾದ ವ್ಯಕ್ತಿಯೆಂದು ತಿಳಿದು ಬಂದಿದ್ದು,ಸೆ. 21ರಂದು ಮಧ್ಯಾಹ್ನ 12.30ಕ್ಕೆ ಕುಮಾರಧಾರ ನದಿಯಲ್ಲಿ ಸ್ನಾನಕ್ಕೆಂದು ಹೇಳಿ ಹೋದವರು ಹಿಂತಿರುಗಿ ಬರದ ಕಾರಣ ಸ್ಥಳೀಯರು ಹುಡುಕಾಟ ಆರಂಭಿಸಿದ್ದು ಪೊಲೀಸರಿಗೂ ಮಾಹಿತಿ ರವಾನೆಯಾಗಿದೆ ಎಂದು ತಿಳಿದುಬಂದಿದೆ.