ಬಂಟ್ವಾಳ: ಗಾಂಧಿ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡ ಬದುಕು ಪೂರ್ಣಪ್ರಮಾಣದಲ್ಲಿ ಸಾಧನೆಯನ್ನು ಹೊಂದಲು ಸಾಧ್ಯ ವಾಗುತ್ತದೆ ಹಾಗೂ ಶಾಸ್ತ್ರೀಜಿಯವರ ಬದುಕಿನ ಹಾದಿ ಭವ್ಯ ಭಾರತದ ನಾಂದಿಯಾಗಿದೆ ಎಂದು ಮುಖ್ಯಶಿಕ್ಷಕ ನಾರಾಯಣ ಪೂಜಾರಿ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರೀಯವರ ಜನ್ಮದಿನಾಚರಣೆ ಪ್ರಯುಕ್ತ ಅವರ ಭಾವಚಿತ್ರಕ್ಕೆ ಹೂ ಸಮರ್ಪಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು ಅಡುಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು.