ಪುತ್ತೂರು: ತಾಲೂಕು ಬಲ್ನಾಡು ಗ್ರಾಮದ ಉಜುರ್ಪಾದೆ ನಿವಾಸಿ ಕಲ್ಲಾರೆ ರಾಘವೇಂದ್ರ ಮಠದಲ್ಲಿ ಹಲವು ವರ್ಷಗಳ ಕಾಲ ಪರಿಚಾರಕರಾಗಿ ಸೇವೆ ಸಲ್ಲಿಸಿದ್ದ ರಾಮಕೃಷ್ಣ ಅಯ್ಯರ್ (64 ) ಅ.1 ರಂದು ನಿಧನರಾದರು.
ರಾಮಕೃಷ್ಣ ರವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸುಮಾರು ಎಂಟು ವರ್ಷಗಳ ಕಾಲ ಪರಿಚಾರಕರಾಗಿ ಸೇವೆ ಸಲ್ಲಿಸಿ ಬಳಿಕ ಕಲ್ಲಾರೆ ಶ್ರೀ ರಾಘವೇಂದ್ರ ಮಠದಲ್ಲಿ ಸೇವೆ ಸಲ್ಲಿಸುತ್ತಿದ್ದರು. ವರ್ಷದ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿ ಬಳಿಕ ಸೇವೆಯಿಂದ ನಿವೃತ್ತಿ ಪಡೆದುಕೊಂಡು ಮನೆಯಲ್ಲಿಯೇ ಇದ್ದರು.
ಮೃತರು ಪತ್ನಿ ಸರೋಜಿನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.