ಪುತ್ತೂರು: ಗಾಂಧಿ ಜಯಂತಿ ಮತ್ತು 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕೋಡಿಂಬಾಡಿ ಗ್ರಾಮ ಪಂಚಾಯತ್ ನ ಎರಡನೇ ವಾರ್ಡಿನಲ್ಲಿ ಸದಸ್ಯರಾದ ಜಯಪ್ರಕಾಶ್ ಬದಿನಾರು ಮತ್ತು ಫ್ರೆಂಡ್ಸ್ ಕ್ಲಬ್ ಸೇಡಿಯಾಪು(ರಿ) ಇವರ ಸಹಭಾಗಿತ್ವದಲ್ಲಿ , ‘ಮನೆ ಬಾಗಿಲಿಗೆ ಪಂಚಾಯತ್’ ಎಂಬ ವಿಶೇಷ ಅಭಿಯಾನ ಕಾರ್ಯಕ್ರಮ ನಡೆಯಿತು.
ಗ್ರಾಮಾಭಿವೃದ್ಧಿ ಅಧಿಕಾರಿ ಚಿತ್ರಾವತಿಯವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದಲ್ಲಿ ಉದ್ಯೋಗ ಖಾತರಿ ಕಾರ್ಡ್ ಅನ್ನು ಸ್ಥಳದಲ್ಲೇ ಫಲಾನುಭವಿಗಳಿಗೆ ನೀಡಲಾಯಿತು. ಅಧಿಕಾರಿ ಚಿತ್ರಾವತಿಯವರು, ಸೋಕ್ ಪಿಟ್ ಮತ್ತು ಸ್ವಚ್ಚತೆಯ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಉಷಾ ಲಕ್ಷ್ಮಣ ಪೂಜಾರಿ, ಸ್ಥಳೀಯ ಸದಸ್ಯರಾದ ಜಯಪ್ರಕಾಶ್ ಬದಿನಾರು ಮತ್ತು ಪೂರ್ಣಿಮಾ ಯತೀಶ್ ಶೆಟ್ಟಿ, ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾದ ಚಂದ್ರಶೇಖರ್ ಕುಲಾಲ್ ಮತ್ತು ಫ್ರೆಂಡ್ಸ್ ಕ್ಲಬ್ ನ ಗೌರವ ಸಲಹೆಗಾರರಾದ ಇಬ್ರಾಹಿಂ ಸೇಡಿಯಾಪು, ಪಂಚಾಯತ್ ಸಿಬ್ಬಂದಿ ರೀತಾ ಉಪಸ್ಥಿತರಿದ್ದರು.