ಪುತ್ತೂರು: ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕುಂಡಡ್ಕ ಶಾಖೆ ಇದರ ವತಿಯಿಂದ ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರು ರವರಿಗೆ ಸರಕಾರದ ವತಿಯಿಂದ ಗೋಶಾಲೆ ನಿರ್ಮಿಸಲು ಹಾಗೂ ಗೋ ಶಾಲೆಗೆ ಉಚಿತವಾಗಿ ಗೋವುಗಳನ್ನು ನೀಡುವ ವ್ಯವಸ್ಥೆ ಮಾಡಲು ಮನವಿ ನೀಡಲಾಯಿತು.
ಕುಳ ಮತ್ತು ವಿಟ್ಲ ಮುಡ್ನೂರು ಗ್ರಾಮದಲ್ಲಿ ಗೋಕಳ್ಳತನ ನಡೆಯುತ್ತಿದ್ದು. ಹಾಗೂ ವಯಸ್ಸಾದ ಮತ್ತು ಸಾಕಲು ಸಾಧ್ಯವಾಗದ ಗೋವುಗಳನ್ನು ಅನ್ಯಕೋಮಿನವರಿಗೆ ಮಾರಾಟ ಮಾಡುತ್ತಿದ್ದು ಇದನ್ನು ತಡೆಕಟ್ಟುವ ನಿಟ್ಟಿನಲ್ಲಿ ನಮ್ಮ ಗ್ರಾಮದಲ್ಲಿ ಸರಕಾರದ ವತಿಯಿಂದ ಗೋಶಾಲೆ ನಿರ್ಮಿಸಿ ಈ ಗೋ ಶಾಲೆಗೆ ಉಚಿತವಾಗಿ ಗೋವುಗಳನ್ನು ನೀಡುವ ವ್ಯವಸ್ಥೆಯನ್ನು ಮಾಡಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಪುಣಚ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಹರಿಪ್ರಸಾದ್ ಯಾದವ್, ಪುಣಚ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿಯಾದ ದಯಾನಂದ ಶೆಟ್ಟಿ ಉಜಿರೆಮಾರ್, ಪುತ್ತೂರು ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ಪಂಚಾಯತ್ ಸದಸ್ಯರಾದ ಉಮೇಶ್ ಅರ್ಕಲ್ತೋಟ, ಪುನೀತ್ ಮಾಡತ್ತಾರ್, ಆನಂದ ಮಾನಜೆಮೂಲೆ, ವನೀತ್ ಅಭಿರಿ ಹಾಗೂ ಇತರ ಕಾರ್ಯಕರ್ತರು ಉಪಸ್ಥಿತರಿದ್ದರು.